Modi government collapse in four months: kj jarg in kolara

ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

Ad
Ad

ಕೋಲಾರ: ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿಗೆ ಬುದ್ದಿಕಲಿಸಿದ್ದಾರೆ. ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಎಂದುರು.

ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಲ್ಲ ಜಾಸ್ತಿ ದಿನವು ಅಂತಹ ರಾಜಕಾರಣ ಉಳಿಯಲ್ಲ ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದಲೂ ಜಾತಿ ಧರ್ಮ, ಭಾಷೆಯ ಭೇಧವಿಲ್ಲದ ಪಕ್ಷವಾಗಿದೆ ಎಲ್ಲಾ ವರ್ಗಗಳ ವಿಶ್ವಾಸದಿಂದ ಬಡವರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಸುಮಾರು 70 ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾಣಿಕೆ ಅಪಾರವಾಗಿದೆ ಬಿಜೆಪಿಯಂತೆ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು ಕಾರ್ಯಕರ್ತರಿಂದ ನಾವು ಎಲ್ಲರೂ ನಾಯಕರಾಗಿದ್ದೇವೆ ಇಲ್ಲಿಗೆ ಬಂದಿದ್ದೇನೆ. ಪಕ್ಷಕ್ಕಾಗಿ ದುಡಿದವರಿಗೆ ಹಂತಹಂತವಾಗಿ ಅವಕಾಶಗಳು ಸಿಗಲಿದೆ ಅಧಿಕಾರಕ್ಕಾಗಿ ಪಕ್ಷ ಅಲ್ಲ ಅನ್ನೋದು ತಿಳಿಯಬೇಕು ಜನರ ಹಿತಕ್ಕಾಗಿ ಪಕ್ಷವಾಗಬೇಕು ತಾಳ್ಮೆಯಿಂದ ಇದ್ದರೆ ಖಂಡಿತವಾಗಿಯೂ ಅವಕಾಶಗಳು ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿದ್ದರೆ ಒಂದಲ್ಲ ಒಂದು ದಿನ ಅವಕಾಶಗಳು ಸಿಗಲಿದೆ ಎಂಬುದಕ್ಕೆ ಸಚಿವ ಕೆ.ಜೆ ಚಾರ್ಜ್ ಅವರು ಉದಾಹರಣೆ ಯುವ ಕಾಂಗ್ರೆಸ್ ಬ್ಲಾಕ್ ಮಟ್ಟದಿಂದ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದು ಅವರಿಗೆ ಅವಕಾಶಗಳು ಬಂದಿವೆ. ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಪ್ತಮುಖ ಕಾರಣವಾಗಿ ಅಧಿಕಾರವಿರಲಿ ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳ್ಮೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು.

ಇದನ್ನೂ ಓದಿ: Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಸೀಸಂದ್ರ ಗೋಪಾಲಗೌಡ, ಪದವೀಧರ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎಸ್ ಸುಧೀರ್, ಮುಖಂಡರಾದ ಜಯದೇವ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ರತ್ನಮ್ಮ, ಮೈಲಾಂಡಹಳ್ಳಿ ಮುರಳಿ, ಅಶ್ವಥ್ ರೆಡ್ಡಿ, ರಾಮಯ್ಯ, ಮುಂತಾದವರು ಇದ್ದರು.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.