Gurumahanth swamiji: Sattur Rajendra Guru who received Akshara Manath at the age of 12

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

ಹುನಗುಂದ: ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು ತಮ್ಮ 12 ನೇ ವಯಸ್ಸಿನಲ್ಲಿ ಉತ್ತರಾಧಿಕಾರಿಗಳಾಗಿ ಇಂದು ಮೈಸೂರು ಜಿಲ್ಲೆ ಮಾತ್ರವಲ್ಲದೇ ನಾಡಿನ ಬಡ ಮಕ್ಕಳಿಗೆ ಅನ್ನ, ವಸತಿ ನೀಡಿ ಅಕ್ಷರ ಹಣತೆ ಹಚ್ಚಿದ ಕೀರ್ತಿ ರಾಜೇಂದ್ರ ಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಇಲಕಲ್‌ನ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಶರಣ ಮಲ್ಲಣ್ಣ ಲೆಕ್ಕಿಹಾಳ ಅವರ ಮನೆಯಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರವಾರ ನಡೆದ ಸುತ್ತೂರ ರಾಜೇಂದ್ರ ಸ್ವಾಮಿಗಳ 109 ನೇ ಜನ್ಮ ದಿನೋತ್ಸವ ಹಾಗೂ 24ನೇ ಮನೆ ಮನಗಳಿಗೆ ವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜೇಂದ್ರ ಗುರುಗಳ ಜನ್ಮದಿನ ವನ್ನು ವಚನ ದಿನ ಎಂದು ಆಚರಸುತ್ತಿರುವದು ಬಸವಾದಿ ಶರಣರ ವಚನಗಳನ್ನು ನಾಡಿನ ಜನತೆಗೆ ತಲುಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದರು.

ಸಭೆಯಲ್ಲಿ ಅನುಭಾವ ನುಡಿಗಳನ್ನಾಡಿದ ವಿಜಯಪುರ ಜ್ಞಾನ ಯೋಗಾಶ್ರಮದ ಸಂಗಮೇಶ್ವರ ಸ್ವಾಮಿಗಳು ರಾಜೇಂದ್ರ ಗುರುಗಳ ಅಕ್ಷರ ದಾಸೋಹ,ಅನ್ನ ದಾಸೋಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಯ ಹರಿಕಾರರಾಗಿ
ಕಾರ್ಯ ಮಾಡಿದರು ಎಂದರು.

ಶರಣ ಸಾಯಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಸ್.ಎನ್. ಹಾದಿಮನಿ ಮಾತನಾಡಿ ರಾಜೇಂದ್ರ ಸ್ವಾಮಿಗಳು ಚಿಕ್ಕ ವಯಸ್ಸಿನಲ್ಲೇ ಸುತ್ತೂರ ಸಂಸ್ಥೆಯ ಬೆಳವಣಿಗೆ ಮಾಡುವ ಮೂಲಕ ಇಂದು ಈ ಸಂಸ್ಥೆ ಜಗತ್ತಿನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸವ ಮೂಲಕ ಅಕ್ಷರ ಕಾಯಕದ ಗುರುಗಳು ಎಂದು ಕರೆಸಿಕೊಂಡಿದ್ದಾರೆ ಎಂದರು.

ಶಿರೂರಿನ ಬಸವಲಿಂಗ ಸ್ವಾಮಿಗಳು ಮಾತನಾಡಿದರು.

ಸಭೆಯಲ್ಲಿ ಭಕ್ತಿಸೇವೆ ಮಾಡಿದ ಶರಣ ಮಲ್ಲಣ್ಣ ಲೆಕ್ಕಿಹಾಳ ದಂಪತಿಗಳನ್ನು ಗೌರವಿಸಿದರು.

ಸಭೆಯ ಪ್ರಾರಂಭದಲ್ಲಿ ಫ್ರಭುದೇವ ಮಾಲಗಿತ್ತಿಮಠ ವಚನ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕೊನೆಯಲ್ಲಿ ಶರಣು ಸಮರ್ಪಿಸಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಎಂ. ಎನ್ ತೆನಿಹಳ್ಳಿ,ಸಂಗಣ್ಣ ನಾಗರಾಳ, ಎಸ್.ಆರ್.ಕಡಿವಾಲ್, ಎಸ್.ಎಂ.ಕೊಪ್ಪರದ ಲೆಕ್ಕಿಹಾಳ ಬಂಧುಗಳು ಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ