Gurumahanth swamiji: Sattur Rajendra Guru who received Akshara Manath at the age of 12

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

ಹುನಗುಂದ: ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು ತಮ್ಮ 12 ನೇ ವಯಸ್ಸಿನಲ್ಲಿ ಉತ್ತರಾಧಿಕಾರಿಗಳಾಗಿ ಇಂದು ಮೈಸೂರು ಜಿಲ್ಲೆ ಮಾತ್ರವಲ್ಲದೇ ನಾಡಿನ ಬಡ ಮಕ್ಕಳಿಗೆ ಅನ್ನ, ವಸತಿ ನೀಡಿ ಅಕ್ಷರ ಹಣತೆ ಹಚ್ಚಿದ ಕೀರ್ತಿ ರಾಜೇಂದ್ರ ಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಇಲಕಲ್‌ನ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಶರಣ ಮಲ್ಲಣ್ಣ ಲೆಕ್ಕಿಹಾಳ ಅವರ ಮನೆಯಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರವಾರ ನಡೆದ ಸುತ್ತೂರ ರಾಜೇಂದ್ರ ಸ್ವಾಮಿಗಳ 109 ನೇ ಜನ್ಮ ದಿನೋತ್ಸವ ಹಾಗೂ 24ನೇ ಮನೆ ಮನಗಳಿಗೆ ವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜೇಂದ್ರ ಗುರುಗಳ ಜನ್ಮದಿನ ವನ್ನು ವಚನ ದಿನ ಎಂದು ಆಚರಸುತ್ತಿರುವದು ಬಸವಾದಿ ಶರಣರ ವಚನಗಳನ್ನು ನಾಡಿನ ಜನತೆಗೆ ತಲುಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದರು.

ಸಭೆಯಲ್ಲಿ ಅನುಭಾವ ನುಡಿಗಳನ್ನಾಡಿದ ವಿಜಯಪುರ ಜ್ಞಾನ ಯೋಗಾಶ್ರಮದ ಸಂಗಮೇಶ್ವರ ಸ್ವಾಮಿಗಳು ರಾಜೇಂದ್ರ ಗುರುಗಳ ಅಕ್ಷರ ದಾಸೋಹ,ಅನ್ನ ದಾಸೋಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಯ ಹರಿಕಾರರಾಗಿ
ಕಾರ್ಯ ಮಾಡಿದರು ಎಂದರು.

ಶರಣ ಸಾಯಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಸ್.ಎನ್. ಹಾದಿಮನಿ ಮಾತನಾಡಿ ರಾಜೇಂದ್ರ ಸ್ವಾಮಿಗಳು ಚಿಕ್ಕ ವಯಸ್ಸಿನಲ್ಲೇ ಸುತ್ತೂರ ಸಂಸ್ಥೆಯ ಬೆಳವಣಿಗೆ ಮಾಡುವ ಮೂಲಕ ಇಂದು ಈ ಸಂಸ್ಥೆ ಜಗತ್ತಿನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸವ ಮೂಲಕ ಅಕ್ಷರ ಕಾಯಕದ ಗುರುಗಳು ಎಂದು ಕರೆಸಿಕೊಂಡಿದ್ದಾರೆ ಎಂದರು.

ಶಿರೂರಿನ ಬಸವಲಿಂಗ ಸ್ವಾಮಿಗಳು ಮಾತನಾಡಿದರು.

ಸಭೆಯಲ್ಲಿ ಭಕ್ತಿಸೇವೆ ಮಾಡಿದ ಶರಣ ಮಲ್ಲಣ್ಣ ಲೆಕ್ಕಿಹಾಳ ದಂಪತಿಗಳನ್ನು ಗೌರವಿಸಿದರು.

ಸಭೆಯ ಪ್ರಾರಂಭದಲ್ಲಿ ಫ್ರಭುದೇವ ಮಾಲಗಿತ್ತಿಮಠ ವಚನ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕೊನೆಯಲ್ಲಿ ಶರಣು ಸಮರ್ಪಿಸಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಎಂ. ಎನ್ ತೆನಿಹಳ್ಳಿ,ಸಂಗಣ್ಣ ನಾಗರಾಳ, ಎಸ್.ಆರ್.ಕಡಿವಾಲ್, ಎಸ್.ಎಂ.ಕೊಪ್ಪರದ ಲೆಕ್ಕಿಹಾಳ ಬಂಧುಗಳು ಉಪಸ್ಥಿತರಿದ್ದರು.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್