Fighting for curry: Fight for mutton curry..! 10 people injured

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಹೈದರಾಬಾದ್: ಮಟನ್ ಕರಿ ವಿಚಾರವಾಗಿ ಮದುವೆ ಮನೆಯಲ್ಲಿ ನಡೆದ ಗಲಾಟೆಯಲ್ಲಿ (Fighting for curry) 10 ಮಂದಿ ಗಾಯಗೊಂಡ ಘಟನೆಯೊಂದು ತೆಲಂಗಾಣದ ನಿಜಾಮಾಬಾದ್‌ನ ನವಿಪೇಟ್‌ನಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವಧು ನವಿಪೇಟೆಯ ವಧುವಿಗೂ ನಂದಿಪೇಟ್ ಮಂಡಲದ ಬಡಗುಣ ಗ್ರಾಮದ ವರನಿಗೂ ಮದುವೆ ನಿಶ್ಚಯ ಮಾಡಲಾಗಿತ್ತು. ಅಂತೆಯೇ ಬುಧವಾರ ನಡೆದ ಮದುವೆ ಸಮಾರಂಭದಲ್ಲಿ ಊಟದಲ್ಲಿ ಮಟನ್ ಕರಿ ವಿಚಾರವಾಗಿ ವಧು ಹಾಗೂ ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಪ್ಲೇಟ್‌ಗಳು, ಗ್ಲಾಸ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳ ಮೂಲಕ ದೈಹಿಕ ಹಲ್ಲೆ ನಡೆದಿದೆ.

ವರನ ಕಡೆಯ ಕೆಲವು ಯುವಕರು, ಕಡಿಮೆ ಮಟನ್ ಬಡಿಸಿದ್ದಾರೆ ಎಂದು ಅತೃಪ್ತಗೊಂದು ಅಡುಗೆ ಸಿಬ್ಬಂದಿಯನ್ನು ಪ್ರಶ್ನಿಸುತ್ತಾ ಗಲಾಟೆ (Fighting for curry) ಶರು ಮಾಡಿದ್ದಾರೆ. ಈ ವೇಳೆ ಎರಡೂ ಕಡೆಯ ಸಂಬಂಧಿಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೇ ಕಲ್ಲು ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ.

ವಧು ಹಾಗೂ ವರನ ಕಡೆಯವರು ಹೊಡೆದಾಡಿಕೊಳ್ಳುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಕೆಲ ಪುರುಷರು ಮತ್ತು ಮಹಿಳೆಯರು ಗಾಯಗೊಂಡಿದ್ದು, ಇತರರು ಅವರಿಗೆ ಸಹಾಯ ಮಾಡುತ್ತಿರುವುದನ್ನು ಕಾಣಬಹುದು. ಸ್ಥಳಕ್ಕಾಗಮಿಸಿದ ಸ್ಥಳೀಯರು ಪೊಲೀಸರು ಎರಡೂ ಕಡೆಯವರನ್ನು ಕೂರಿಸಿ ಮಾತನಾಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ: Time bomb: ಉಗ್ರನ ಮೃತದೇಹದಲ್ಲಿ ಟೈಮ್ ಬಾಂಬ್ ಇಟ್ಟು ಪಾರ್ಸೆಲ್..! ಮುಂದೇನಾಯ್ತು..? (ವಿಡಿಯೋ ನೋಡಿ)

ಗಲಾಟೆಯಲ್ಲಿ ಗಾಯಗೊಂಡ 10 ಮಂದಿಯನ್ನು ನಿಜಾಮಾಬಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಒಂದು ಗುಂಪಿನ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Latest News

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ

ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ನಾಲತವಾಡ : ಹೋಬಳಿ ವ್ಯಾಪ್ತಿಯ ಅಡವಿ ಸೋಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್ 2026-27 ಸಾಲಿನ ನರೇಗಾ ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ ಜರುಗಿತು. .ಅಡವಿ ಸೋಮನಾಳ ಪಿಡಿಓ ನಿರ್ಮಲಾ ತೋಟದ ಮಾತನಾಡಿ, ರೈತರಿಗೆ,ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಬರುವ ಕಾಮಗಾರಿಗಳಾದ ಕೃಷಿ ಹೊಂಡ,ಬದು ನಿರ್ಮಾಣ, ಚೆಕ್ ಡ್ಯಾಮ್ ದನದ ಕೊಟ್ಟಿಗೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ಮುದ್ದೇಬಿಹಾಳ : ಗೋವಾ ರಾಜ್ಯದಲ್ಲಿ ನಡೆಯುತ್ತಿರುವ ಯೂಥ್ ಗೇಮ್ಸ್ ಇಂಡಿಯಾದಿoದ ರಾಷ್ಟ್ರಮಟ್ಟದ 10 ವರ್ಷದೊಳಗಿನ ಬಾಲಕರಿಗಾಗಿ ಹಮ್ಮಿಕೊಂಡಿದ್ದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿ ಮೊಹ್ಮದ್‌ಜಿಶಾನ್ ರಿಸಾಲ್ದಾರ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಮೊಹ್ಮದ್‌ಜಿಶಾನ್ 15 ಸೆಕೆಂಡ್ ನಲ್ಲಿ ನಿಗದಿ 100 ಮೀಟರ್ ಓಟವನ್ನು ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದಿಕೊಂಡು ಅಂತರಾಷ್ಟ್ರೀಯ