Tragedy: A strange incident in Thotaganti village.. A missing woman was found in a well

Tragedy: ತೋಟಗಂಟಿ ಗ್ರಾಮದಲ್ಲೊಂದು ವಿಚಿತ್ರ ಘಟನೆ.. ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಪತ್ತೆ!

Tragedy: ತೋಟಗಂಟಿ ಗ್ರಾಮದಲ್ಲೊಂದು ವಿಚಿತ್ರ ಘಟನೆ.. ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಪತ್ತೆ!

ಗದಗ: ಜಿಲ್ಲೆಯ ರೋಣ ತಾಲೂಕಿನ ತೋಟಗಂಟಿ ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ ಅದೇ ಗ್ರಾಮದ ಹೊಲದಲ್ಲಿನ ನೀರಿಲ್ಲದ ಹಳೆ ಬಾವಿಯಲ್ಲಿ ಮೂರು ದಿನಗಳ ನಂತರ ಪತ್ತೆಯಾಗಿದ್ದಾರೆ. (Tragedy)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸದ್ಯ, ಮಹಿಳೆಯನ್ನು ರಕ್ಷಿಸಿ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತೋಟಗಂಟಿ ಗ್ರಾಮದಿಂದ ಕೋಚಲಾಪುರಕ್ಕೆ ಹೋಗುವ ಮಾರ್ಗದಲ್ಲಿರುವ ಮನೆಯಲ್ಲಿ ವಾಸವಿದ್ದ ಪಾರ್ವತಿ– ವೀರಯ್ಯ ಕಲ್ಮಠ ದಂಪತಿಗೆ ಆರು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಆಗಸ್ಟ್‌ 20ರಂದು ಪಾರ್ವತಿ ನಾಪತ್ತೆಯಾಗಿದ್ದರು. ಗಂಡ ಹಾಗೂ ಕುಟುಂಬಸ್ಥರು ಎಲ್ಲೆಡೆ ಹುಡುಕಿ, ಎಲ್ಲಿಯೂ ಸಿಗದೆ ಇದ್ದಾಗ ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ನೀಡಿದ್ದರು.

ಆಗಸ್ಟ್ 22ರಂದು ಗ್ರಾಮದಿಂದ ಅಂದಾಜು 1 ಕಿ.ಮೀ. ದೂರದ ಬಾವಿಯಲ್ಲಿ ಮಹಿಳೆಯೊಬ್ಬರು ಅರಚುತ್ತಿರುವುದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕರಿಗೆ ಕೇಳಿಸಿದೆ. ಆಗ ಅವರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ, ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

ಆ.20ರಂದು ಬೆಳಿಗ್ಗೆ 5ರ ಸುಮಾರಿಗೆ ಮನೆ ಮುಂದೆ ನಿಂತಿದ್ದಾಗ ವಯಸ್ಕ ಮಹಿಳೆಯೊಬ್ಬರು ನನ್ನ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದಳು. ಕೈಬಳೆ, ಕಾಲುಂಗರ ನೀಡುವಂತೆ ಒತ್ತಾಯಿಸಿದಳು. ಬಳಿಕ ನನ್ನನ್ನು ಎಳೆದುಕೊಂಡು ಬಂದು ಬಾವಿಗೆ ತಳ್ಳಿದಳು. ಬಾವಿಗೆ ಬಿದ್ದ ಮಾರನೇ ದಿನ ನನಗೆ ಪ್ರಜ್ಞೆ ಬಂದಿದೆ. ಆಗ ಕಿರುಚಿದರೂ ಯಾರೂ ಸಹಾಯಕ್ಕೆ ಬರಲಿಲ್ಲ. ಆ. 22ರಂದು ಧ್ವನಿ ಕೇಳಿದ ಜನರು ನನ್ನ ಕಾಪಾಡಿದ್ದಾರೆ ಎಂದು ತೊಂದರೆಗೆ ಒಳಗಾದ ಮಹಿಳೆ ಮಾಹಿತಿ ನೀಡಿದ್ದಾರೆ.

ಕಾಣೆಯಾದ ನಂತರ ಹೊಲ, ಮನಿ, ಊರೂರು ಹುಡುಕಿದ್ದೆವು. ಎಲ್ಲಿಯೂ ಸಿಗದ ಕಾರಣ ದೂರು ಕೊಟ್ಟಿದ್ದೆವು. ಬಾವಿಯಲ್ಲಿ ಬಿದ್ದು ರಕ್ಷಣೆಗೆ ಕೂಗುತ್ತಿರುವ ವಿಷಯ ಗೊತ್ತಾದ ನಂತರ ಆಕೆಯನ್ನು ರಕ್ಷಿಸಿ, ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವೆ ಎಂದು ಮಹಿಳೆ
ಯ ಪತಿ ವೀರಯ್ಯ ಮಾಹಿತಿ ನೀಡಿದರು.

ಇದನ್ನೂ ಓದಿ: Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಈ ಕುರಿತು ನಮ್ಮಲ್ಲಿ ಪ್ರಕರಣ ದಾಖಲಾಗಿಲ್ಲ. ಆದರೆ, ಎಂ.ಎಲ್.ಸಿ ಆಗಿದೆ. ಮಹಿಳೆಯನ್ನು ಬಾವಿಯಿಂದ ಹೊರಗೆ ತೆಗೆದಾಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗದಗಕ್ಕೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುವುದು ಎಂದು ನರೇಗಲ್‌ ಪೊಲೀಸ್‌ ಠಾಣೆ ಎಸ್‌ಐ ಐಶ್ವರ್ಯ ನಾಗರಾಳ ತಿಳಿಸಿದ್ದಾರೆ.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್