ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಇಳಕಲ್: ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಏಕವಚನದಲ್ಲಿ ನಿಂದಿಸಿ, ಸುಳ್ಳು ಆರೋಪ ಮಾಡಿದ್ದಾರೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ದಿನಾಂಕ 26-8-2024 ರಂದು ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ನಾಟಕ ಉದ್ಘಾಟನೆ ಮಾಡಿದ ನಂತರ ಶಾಸಕ ಕಾಶಪ್ಪನವರ ವಿರುದ್ಧ ರಾಜುಗೌಡ ಪಾಟೀಲ್ ವಾಗ್ದಾಳಿ ಮಾಡಿದ್ದರು.

“ಈ ವೇಳೆ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಇಲ್ಲಸಲ್ಲದ ಸುಳ್ಳು ಆರೋಪ‌ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ್ ಬಸಪ್ಪ ಮಡಿವಾಳರ ಎಂಬುವರು ದಿನಾಂಕ 29-8-2024ರಂದು ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಇಳಕಲ್ ಗ್ರಾಮೀಣ PSI ಎಂ.ಎ. ಸತಿಗೌಡರ್ ತನಿಖೆ ಕೈಗೊಂಡಿದ್ದಾರೆ.

ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ: ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ

ಇಳಕಲ್: “** ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ” ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ಮಗನಾದ ರಾಜುಗೌಡ ಪಾಟೀಲ್ ಅವರು ಸವಾಲು ಹಾಕಿದರು.

ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ಸಾಮಾಜಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.

“ಇಂದು ನಾನು ರಾಜಕೀಯ ಮಾತನಾಡಲು ಬಂದಿರಲಿಲ್ಲ. ಆದರೆ, ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಸುದ್ದಿಗೋಷ್ಠಿಯಲ್ಲಿ ನಮ್ಮ ತಂದೆಯವರಿಗೆ ದೊಡ್ಡನಗೌಡ ನೀ ದಡ್ಡ ಎಂದು ನಿಂದಿಸಿದ ಕಾರಣ ರಾಜಕೀಯ ಮಾತನಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ” ಎಂದು ಮಾತು ಆರಂಭಿಸಿದರು.

“ನಾವು ಇಳಕಲ್ ನಲ್ಲಿ ಇರುವವರು. ಬಾಯಿಗೆ ಬಂದಂಗ ಮಾತನಾಡಿದರೆ ಸುಮ್ಮನೆ ಕೂರಲು ಆಗಲ್ಲ. ಇನ್ನು ಮುಂದೆ ನೀ ಬೊಗಳು.. ನಾನು ನೋಡ್ತಿನಿ…” ಎಂದು ಎಚ್ಚರಿಕೆ ರೀತಿ ಮಾತನಾಡಿದರು.

“ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಬಾಯಿಗೆ ಬಂದಂಗ ಮಾತನಾಡುತ್ತಾ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಯಾ? ನಾಳೆ‌ ಚಿಕ್ಕ ಆದಾಪೂರ ಗ್ರಾಮಕ್ಕೆ ಬರ್ತಿಯಲ್ಲ… ಬಾ.. ಏನು ಮಾಡ್ತಿ ನೋಡ್ತಿವಿ” ಎಂದು ಗುಡುಗಿದರು.

ವಾಗ್ವಾದಕ್ಕೆ ಕಾರಣ ಏನು?

ಇಳಕಲ್ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಂತರ ಶಾಸಕರು ಮತ್ತು ಮಾಜಿ‌ ಶಾಸಕರ ನಡುವಿನ ವಾಕ್ಸಮರ ಜೋರಾಗಿದೆ. ಈಗ ಮಾಜಿ ಶಾಸಕ ದೊಡ್ಡನಗೌಡ ಅವರ ಮಗನೂ ಮಾತಿನ ಮಲ್ಲ ಯುದ್ಧಕ್ಕೆ ಮತ್ತೆ ಪ್ರವೇಶವನ್ನು ಚಿಕ್ಕ ಆದಾಪೂರ ಗ್ರಾಮದಿಂದ‌ ಮಾಡಿದ್ದಾರೆ.

ಬಿಜೆಪಿ ನಾಯಕತ್ವ ಯಾರದ್ದು?

ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೂ ಹೀಗೆ ಮಾತಿನ ಯುದ್ಧ ನಡೆಸಿದ್ದ ಕಾಶಪ್ಪನವರ ಮತ್ತು ದೊಡ್ಡನಗೌಡ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ಸು ಕಂಡಿದ್ದರು. ಈಗ ತಾಲೂಕು ಬಿಜೆಪಿ ನಾಯಕತ್ವ ಚರ್ಚೆ ಜೋರಾಗಿರುವಾಗಲೇ ಮಾಜಿ ಶಾಸಕರು ತಮ್ಮ ಮಗನನ್ನು ಮತ್ತೆ ಮುನ್ನೆಲೆ ತರಲು ಮುಂದಾಗಿದ್ದಾರಾ ಎಂಬ ಚರ್ಚೆ ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಏತನ್ಮಧ್ಯೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರಿಸಿದ ನಂತರ ಎಸ್. ಆರ್. ನವಲಿಹಿರೇಮಠ ಅವರೂ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಬಿಜೆಪಿ ನಾಯಕತ್ವ ಯಾರ ಬಳಿ ಉಳಿಯುತ್ತದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ