ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಇಳಕಲ್: ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಏಕವಚನದಲ್ಲಿ ನಿಂದಿಸಿ, ಸುಳ್ಳು ಆರೋಪ ಮಾಡಿದ್ದಾರೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ದಿನಾಂಕ 26-8-2024 ರಂದು ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ನಾಟಕ ಉದ್ಘಾಟನೆ ಮಾಡಿದ ನಂತರ ಶಾಸಕ ಕಾಶಪ್ಪನವರ ವಿರುದ್ಧ ರಾಜುಗೌಡ ಪಾಟೀಲ್ ವಾಗ್ದಾಳಿ ಮಾಡಿದ್ದರು.

“ಈ ವೇಳೆ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಇಲ್ಲಸಲ್ಲದ ಸುಳ್ಳು ಆರೋಪ‌ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ್ ಬಸಪ್ಪ ಮಡಿವಾಳರ ಎಂಬುವರು ದಿನಾಂಕ 29-8-2024ರಂದು ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಇಳಕಲ್ ಗ್ರಾಮೀಣ PSI ಎಂ.ಎ. ಸತಿಗೌಡರ್ ತನಿಖೆ ಕೈಗೊಂಡಿದ್ದಾರೆ.

ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ: ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ

ಇಳಕಲ್: “** ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ” ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ಮಗನಾದ ರಾಜುಗೌಡ ಪಾಟೀಲ್ ಅವರು ಸವಾಲು ಹಾಕಿದರು.

ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ಸಾಮಾಜಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.

“ಇಂದು ನಾನು ರಾಜಕೀಯ ಮಾತನಾಡಲು ಬಂದಿರಲಿಲ್ಲ. ಆದರೆ, ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಸುದ್ದಿಗೋಷ್ಠಿಯಲ್ಲಿ ನಮ್ಮ ತಂದೆಯವರಿಗೆ ದೊಡ್ಡನಗೌಡ ನೀ ದಡ್ಡ ಎಂದು ನಿಂದಿಸಿದ ಕಾರಣ ರಾಜಕೀಯ ಮಾತನಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ” ಎಂದು ಮಾತು ಆರಂಭಿಸಿದರು.

“ನಾವು ಇಳಕಲ್ ನಲ್ಲಿ ಇರುವವರು. ಬಾಯಿಗೆ ಬಂದಂಗ ಮಾತನಾಡಿದರೆ ಸುಮ್ಮನೆ ಕೂರಲು ಆಗಲ್ಲ. ಇನ್ನು ಮುಂದೆ ನೀ ಬೊಗಳು.. ನಾನು ನೋಡ್ತಿನಿ…” ಎಂದು ಎಚ್ಚರಿಕೆ ರೀತಿ ಮಾತನಾಡಿದರು.

“ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಬಾಯಿಗೆ ಬಂದಂಗ ಮಾತನಾಡುತ್ತಾ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಯಾ? ನಾಳೆ‌ ಚಿಕ್ಕ ಆದಾಪೂರ ಗ್ರಾಮಕ್ಕೆ ಬರ್ತಿಯಲ್ಲ… ಬಾ.. ಏನು ಮಾಡ್ತಿ ನೋಡ್ತಿವಿ” ಎಂದು ಗುಡುಗಿದರು.

ವಾಗ್ವಾದಕ್ಕೆ ಕಾರಣ ಏನು?

ಇಳಕಲ್ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಂತರ ಶಾಸಕರು ಮತ್ತು ಮಾಜಿ‌ ಶಾಸಕರ ನಡುವಿನ ವಾಕ್ಸಮರ ಜೋರಾಗಿದೆ. ಈಗ ಮಾಜಿ ಶಾಸಕ ದೊಡ್ಡನಗೌಡ ಅವರ ಮಗನೂ ಮಾತಿನ ಮಲ್ಲ ಯುದ್ಧಕ್ಕೆ ಮತ್ತೆ ಪ್ರವೇಶವನ್ನು ಚಿಕ್ಕ ಆದಾಪೂರ ಗ್ರಾಮದಿಂದ‌ ಮಾಡಿದ್ದಾರೆ.

ಬಿಜೆಪಿ ನಾಯಕತ್ವ ಯಾರದ್ದು?

ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೂ ಹೀಗೆ ಮಾತಿನ ಯುದ್ಧ ನಡೆಸಿದ್ದ ಕಾಶಪ್ಪನವರ ಮತ್ತು ದೊಡ್ಡನಗೌಡ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ಸು ಕಂಡಿದ್ದರು. ಈಗ ತಾಲೂಕು ಬಿಜೆಪಿ ನಾಯಕತ್ವ ಚರ್ಚೆ ಜೋರಾಗಿರುವಾಗಲೇ ಮಾಜಿ ಶಾಸಕರು ತಮ್ಮ ಮಗನನ್ನು ಮತ್ತೆ ಮುನ್ನೆಲೆ ತರಲು ಮುಂದಾಗಿದ್ದಾರಾ ಎಂಬ ಚರ್ಚೆ ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಏತನ್ಮಧ್ಯೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರಿಸಿದ ನಂತರ ಎಸ್. ಆರ್. ನವಲಿಹಿರೇಮಠ ಅವರೂ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಬಿಜೆಪಿ ನಾಯಕತ್ವ ಯಾರ ಬಳಿ ಉಳಿಯುತ್ತದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ