Channapatna by-election: Explosive bomb exploded by C.P. Yogeshwar

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಟಿಕೆಟ್ (Channapattana by election) ಕಾವು ಏರುತ್ತಿದ್ದು, ಇದೇ ವಿಚಾರವಾಗಿ ಶುಕ್ರವಾರ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಈ ವೇಳೆ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರು ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರುವ ಸಾಧ್ಯತೆಯನ್ನು ರಾಜ್ಯದ ನಾಯಕರು ತಳ್ಳಿಹಾಕಿದ್ದಾರೆ. ಅವರು ಬಿಜೆಪಿಯಲ್ಲೇ ಉಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಶಾಸಕರಾದ ಅರವಿಂದ್ ಬೆಲ್ಲದ್, ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ಅವರನ್ನೊಳಗೊಂಡ ನಿಯೋಗ ಜೆ.ಪಿ.ನಡ್ಡಾ ಹಾಗೂ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಉಪಚುನಾವಣೆ ಕುರಿತು ಚರ್ಚಿಸಿತು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಆರ್.ಅಶೋಕ್ ಮಾತನಾಡಿ, ಗುರುವಾರ ರಾತ್ರಿ ಚನ್ನಪಟ್ಟಣ ಉಪಚುನಾವಣೆ ಕುರಿತು ಸುದೀರ್ಘ ಚರ್ಚೆಯಾಗಿದೆ. ಶುಕ್ರವಾರ ಬಿ.ಎಲ್. ಸಂತೋಷ್ ಮತ್ತು ನಡ್ಡಾ ಅವರೊಂದಿಗೂ ಮಾತುಕತೆ ನಡೆಸಿದ್ದೇವೆ. ಟಿಕೆಟ್ ಬಗ್ಗೆ ಎನ್‌ಡಿಎ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.

ಇದೇ ವೇಳೆ ಯೋಗೇಶ್ವರ್ ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆಂಬ ಸುದ್ದಿಗಳ ಕುರಿತು ಪ್ರತಿಕ್ರಿಯಿಸಿದ ಅವರು ಅಂಥ ಸಾಧ್ಯತೆಗಳನ್ನು ತಳ್ಳಿಹಾಕಿದರು. ಯೋಗೇಶ್ವ‌ರ್ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಊಹಾಪೋಹ. ಅವರು ಬಿಜೆಪಿಯಲ್ಲೇ ಇರಲಿದ್ದಾರೆ. (Channapattana by election)

ಟಿಕೆಟ್ ವಿಚಾರವಾಗಿ ಜೆಡಿಎಸ್ ವರಿಷ್ಠ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ನಮ್ಮ
ವರಿಷ್ಠರು ಸೇರಿ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಡಿಕೆಶಿಗೆ ಟಾಂಗ್

ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ ಅಶೋಕ್, ಅವರು ಆಚನ್ನಪಟ್ಟಣಕ್ಕೆ ಹೋಗಿ ಜನರ ಕಿವಿ ಮೇಲೆ ಹೂವಿಡಲು ಸಾಧ್ಯವಿಲ್ಲ. ಕ್ಷೇತ್ರದ ಜನರು ಜಾಣರಿದ್ದಾರೆ. ಡಿ.ಕೆ.ಶಿವಕುಮಾರ್ ವಿಸಿಟಿಂಗ್ ಡಾಕ್ಟರ್ ಇದ್ದಂತೆ. ಚುನಾವಣೆ ಇದ್ದಾಗ ಮಾತ್ರ ಕ್ಷೇತ್ರಕ್ಕೆ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

Latest News

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್