Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

ಮೇಷ ರಾಶಿ: ಅತಿಯಾದ ಹಠ ಒಳ್ಳೆಯದಲ್ಲ.ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು.ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology)

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವೃಷಭ ರಾಶಿ: ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ.ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರಲಿವೆ. ಸಮಸ್ಯೆಗಳೂ ದೂರಾಗಲಿವೆ.ಪ್ರಮುಖ ನಿರ್ಧಾರ ತೆಗೆದು ಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದು ಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಮನಸ್ಸಿಗೆ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ.(ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಪತ್ನಿ ಕುಟುಂಬಸ್ಥರೊಂದಿಗೆ ಉತ್ತಮ ಸಮಯ ಕಳೆಯಲಿ ದ್ದೀರಿ.ಹೊಸ ಕೆಲಸ,ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ: ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ.
(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology

ತಿಥಿ : ತ್ರಯೋದಶಿ
ನಕ್ಷತ್ರ : ಪುಷ್ಯ ನಕ್ಷತ್ರ .

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ:06:00AM ರಿಂದ 07:30AM
ಯಮಗಂಡಕಾಲ:01:30PM ರಿಂದ 03:00PM

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600