Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

ಮೇಷ ರಾಶಿ: ಅತಿಯಾದ ಹಠ ಒಳ್ಳೆಯದಲ್ಲ.ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು.ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology)

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವೃಷಭ ರಾಶಿ: ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ.ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರಲಿವೆ. ಸಮಸ್ಯೆಗಳೂ ದೂರಾಗಲಿವೆ.ಪ್ರಮುಖ ನಿರ್ಧಾರ ತೆಗೆದು ಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದು ಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಮನಸ್ಸಿಗೆ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ.(ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಪತ್ನಿ ಕುಟುಂಬಸ್ಥರೊಂದಿಗೆ ಉತ್ತಮ ಸಮಯ ಕಳೆಯಲಿ ದ್ದೀರಿ.ಹೊಸ ಕೆಲಸ,ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ: ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ.
(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology

ತಿಥಿ : ತ್ರಯೋದಶಿ
ನಕ್ಷತ್ರ : ಪುಷ್ಯ ನಕ್ಷತ್ರ .

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ:06:00AM ರಿಂದ 07:30AM
ಯಮಗಂಡಕಾಲ:01:30PM ರಿಂದ 03:00PM

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ