Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಬೆಂಗಳೂರು: ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು (Gold Theft) ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ ಎಂದು ತಿಳಿದು ಬಂದಿದೆ. (Gold Theft)

ಆರೋಪಿಯಿಂದ 5.50 ಲಕ್ಷ ರೂಪಾಯಿ ಮೌಲ್ಯದ 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿ ಚಂದ್ರಿಕಾ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ದೂರುದಾರೆ ಚಂದ್ರಿಕಾ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿಯಾಗಿದ್ದಾರೆ. ಪೇಯಿಂಗ್ ಗೆಸ್‌ವೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಾರೆ. ಇವರ ಪತಿ ಶರವಣ ಸರಕು ಸಾಗಣೆ ವಾಹನದ ಚಾಲಕನಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲು ಆ.15ರಂದು ಅತ್ತಿಗೆ ಶಶಿಕಲಾ ಅವರ ದೊಡ್ಡತೋಗೂರು ನಿವಾಸಕ್ಕೆ ತೆರಳಿದ್ದರು. ಈ ವೇಳೆ ಚಂದ್ರಿಕಾ ಸಹ ಅಕ್ಕ ಶಶಿಕಲಾ ಮನೆಗೆ ಬಂದಿದ್ದು, ಪತಿಗೆ ಫಾರ್ಮಾ ಸಿಯಲ್ಲಿ ಔಷಧಿ ತರುವಂತೆ ತನ್ನ ಬೈಕ್ ಕೀ ನೀಡಿದರು.

ಔಷಧಿ ತರಲು ಹೋಗಿ ತಂಗಿ ಮನೆಯಲ್ಲೇ ಕಳ್ಳತನ:

ಈ ವೇಳೆ ಶಶಿಕಲಾ, ಬೈಕ್‌ನಲ್ಲಿ ಬೊಮ್ಮನ ಹಳ್ಳಿಯ ಹೊಸೂರು ರಸ್ತೆಯಲ್ಲಿ ವಾಸವಿರುವ ದೊಡ್ಡಮ್ಮನ ಮನೆಗೆ ಬಂದಿದ್ದಾಳೆ. ಈ ವೇಳೆ ದ್ವಿಚಕ್ರ ವಾಹನದ ಕೀ ಬಂಚ್‌ನಲ್ಲಿ ಶಶಿಕಲಾ ತಂಗಿ ಚಂದ್ರಿಕಾಳ ಮನೆಯ ಕೀ ಇರುವುದನ್ನು ಗಮನಿಸಿದ್ದಾಳೆ. ಬಳಿಕ ಜತೆಯಲ್ಲಿ ದೊಡ್ಡ ಮೃನ ಕರೆದುಕೊಂಡು ಆಡುಗೋಡಿಯ ವಿಎಸ್‌ಆರ್ ಲೇಔಟ್‌ಗೆ ಬಂದಿದ್ದು, ತಂಗಿ ಮನೆಯ ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿದ್ದಾಳೆ. ನೀನು ಇಲ್ಲೇ ಇರು. ನಾನು ಔಷಧಿ ತರುತ್ತೇನೆ ಎಂದು ಹೇಳಿ ಚಂದ್ರಿಕಾಳ ಮನೆಯತ್ತ ತೆರಳಿದ್ದಾಳೆ. ಬಳಿಕ ಕೀನಿಂದ ಮನೆ ಬಾಗಿಲು ತೆರೆದು ಮನೆ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಮಾಡಿದ್ದಾಳೆ. ಬಳಿಕ ದೊಡ್ಡಮ್ಮನ ಜತೆಗೆ ಔಷಧಿ ತೆಗೆದುಕೊಂಡು ಮನೆಗೆ ಬಂದು ಚಂದ್ರಿಕಾಗೆ ಬೈಕ್ ಕೀ ನೀಡಿದ್ದಾಳೆ.

ಸಿಸಿಟಿವಿ ಸುಳಿವು ಆಧರಿಸಿ ಬಂಧನ:

ಪತಿ ಶರವಣನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಆ.20ರಂದು ಮನೆಗೆ ತೆರಳಿ ರುವ ಚಂದ್ರಿಕಾ, ಬೀರು ನೋಡಿದಾಗ ಚಿನ್ನ ಹಾಗೂಬೆಳ್ಳಿ ಆಭರಣಗಳು ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನಮೇರೆಗೆ ತನಿಖೆಗೆ ಇಳಿದಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಮಾಡಿದಾಗ, ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ದಾಗ, ಶಶಿಕಲಾಳ ಚಲನವಲನ ಸೆರೆಯಾಗಿರು ವುದು ಕಂಡು ಬಂದಿದೆ. ಬಳಿಕ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಂಗಿಯ ಮನೆಯಲ್ಲಿ ತಾನೇ ಕಳವು ಮಾಡಿದ್ದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ನಮಾಜ್ ವಿರಾಮ ರದ್ದು!

ಕದ್ದ ಚಿನ್ನಾಭ ರಣಗಳ ಪೈಕಿ ಕೆಲವನ್ನು ಮನೆಯಲ್ಲೇ ಇರಿಸಿ ದ್ದಳು. ಕೆಲವು ಆಭರಣಗಳನ್ನು ಶಿಕಾರಪಾಳ್ಯ ದೆ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇರಿಸಿದಳು. ಆರೋಪಿ ಮಾಹಿತಿ ಮೇರೆಗೆ ಆರಭರಣಗಳನ್ನು ಜಪ್ತಿ ಮಾಡಲಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ