Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಬೆಂಗಳೂರು: ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು (Gold Theft) ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ ಎಂದು ತಿಳಿದು ಬಂದಿದೆ. (Gold Theft)

ಆರೋಪಿಯಿಂದ 5.50 ಲಕ್ಷ ರೂಪಾಯಿ ಮೌಲ್ಯದ 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿ ಚಂದ್ರಿಕಾ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ದೂರುದಾರೆ ಚಂದ್ರಿಕಾ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿಯಾಗಿದ್ದಾರೆ. ಪೇಯಿಂಗ್ ಗೆಸ್‌ವೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಾರೆ. ಇವರ ಪತಿ ಶರವಣ ಸರಕು ಸಾಗಣೆ ವಾಹನದ ಚಾಲಕನಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲು ಆ.15ರಂದು ಅತ್ತಿಗೆ ಶಶಿಕಲಾ ಅವರ ದೊಡ್ಡತೋಗೂರು ನಿವಾಸಕ್ಕೆ ತೆರಳಿದ್ದರು. ಈ ವೇಳೆ ಚಂದ್ರಿಕಾ ಸಹ ಅಕ್ಕ ಶಶಿಕಲಾ ಮನೆಗೆ ಬಂದಿದ್ದು, ಪತಿಗೆ ಫಾರ್ಮಾ ಸಿಯಲ್ಲಿ ಔಷಧಿ ತರುವಂತೆ ತನ್ನ ಬೈಕ್ ಕೀ ನೀಡಿದರು.

ಔಷಧಿ ತರಲು ಹೋಗಿ ತಂಗಿ ಮನೆಯಲ್ಲೇ ಕಳ್ಳತನ:

ಈ ವೇಳೆ ಶಶಿಕಲಾ, ಬೈಕ್‌ನಲ್ಲಿ ಬೊಮ್ಮನ ಹಳ್ಳಿಯ ಹೊಸೂರು ರಸ್ತೆಯಲ್ಲಿ ವಾಸವಿರುವ ದೊಡ್ಡಮ್ಮನ ಮನೆಗೆ ಬಂದಿದ್ದಾಳೆ. ಈ ವೇಳೆ ದ್ವಿಚಕ್ರ ವಾಹನದ ಕೀ ಬಂಚ್‌ನಲ್ಲಿ ಶಶಿಕಲಾ ತಂಗಿ ಚಂದ್ರಿಕಾಳ ಮನೆಯ ಕೀ ಇರುವುದನ್ನು ಗಮನಿಸಿದ್ದಾಳೆ. ಬಳಿಕ ಜತೆಯಲ್ಲಿ ದೊಡ್ಡ ಮೃನ ಕರೆದುಕೊಂಡು ಆಡುಗೋಡಿಯ ವಿಎಸ್‌ಆರ್ ಲೇಔಟ್‌ಗೆ ಬಂದಿದ್ದು, ತಂಗಿ ಮನೆಯ ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿದ್ದಾಳೆ. ನೀನು ಇಲ್ಲೇ ಇರು. ನಾನು ಔಷಧಿ ತರುತ್ತೇನೆ ಎಂದು ಹೇಳಿ ಚಂದ್ರಿಕಾಳ ಮನೆಯತ್ತ ತೆರಳಿದ್ದಾಳೆ. ಬಳಿಕ ಕೀನಿಂದ ಮನೆ ಬಾಗಿಲು ತೆರೆದು ಮನೆ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಮಾಡಿದ್ದಾಳೆ. ಬಳಿಕ ದೊಡ್ಡಮ್ಮನ ಜತೆಗೆ ಔಷಧಿ ತೆಗೆದುಕೊಂಡು ಮನೆಗೆ ಬಂದು ಚಂದ್ರಿಕಾಗೆ ಬೈಕ್ ಕೀ ನೀಡಿದ್ದಾಳೆ.

ಸಿಸಿಟಿವಿ ಸುಳಿವು ಆಧರಿಸಿ ಬಂಧನ:

ಪತಿ ಶರವಣನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಆ.20ರಂದು ಮನೆಗೆ ತೆರಳಿ ರುವ ಚಂದ್ರಿಕಾ, ಬೀರು ನೋಡಿದಾಗ ಚಿನ್ನ ಹಾಗೂಬೆಳ್ಳಿ ಆಭರಣಗಳು ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನಮೇರೆಗೆ ತನಿಖೆಗೆ ಇಳಿದಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಮಾಡಿದಾಗ, ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ದಾಗ, ಶಶಿಕಲಾಳ ಚಲನವಲನ ಸೆರೆಯಾಗಿರು ವುದು ಕಂಡು ಬಂದಿದೆ. ಬಳಿಕ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಂಗಿಯ ಮನೆಯಲ್ಲಿ ತಾನೇ ಕಳವು ಮಾಡಿದ್ದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ನಮಾಜ್ ವಿರಾಮ ರದ್ದು!

ಕದ್ದ ಚಿನ್ನಾಭ ರಣಗಳ ಪೈಕಿ ಕೆಲವನ್ನು ಮನೆಯಲ್ಲೇ ಇರಿಸಿ ದ್ದಳು. ಕೆಲವು ಆಭರಣಗಳನ್ನು ಶಿಕಾರಪಾಳ್ಯ ದೆ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇರಿಸಿದಳು. ಆರೋಪಿ ಮಾಹಿತಿ ಮೇರೆಗೆ ಆರಭರಣಗಳನ್ನು ಜಪ್ತಿ ಮಾಡಲಾಗಿದೆ.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ