young man dances obscenely with a young woman wearing a saffron shawl

Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

ಮಂಗಳೂರು: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಈ ಘಟನೆ ದಕ್ಷಿಣ ಕನ್ನಡದಲ್ಲಿ ಸಂಭವಿಸಿದೆ.

ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ, ಧಾರ್ಮಿಕ ಮೆರವಣಿಗೆಯಲ್ಲಿ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಹುಚ್ಚಾಟ ಮೆರೆದಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ.

ವೈರಲ್ ವಿಡಿಯೋದಲ್ಲಿ ಯುವಕರ ಗುಂಪಿನ ನಡುವೆ ಒಂಟಿ ಯುವತಿಯೊಬ್ಬಳು ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸಿದ್ದಾನೆ.

ಈ ವೇಳೆ ಇರುಸುಮುರುಸುಗೊಂಡ ಯುವತಿ ಆತನನ್ನು ದೂರ ತಳ್ಳಿ ಅಲ್ಲಿಂದ ಬೇರೆಡೆ ಹೋಗಲು ಪ್ರಯತ್ನಿಸಿರುವುದನ್ನು ವಿಡಿಯೋದಲ್ಲಿ (Viral video) ನೋಡಬಹುದು.

ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಈ ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ, ದಕ್ಷಿಣ ಕನ್ನಡದಲ್ಲಿ ಇದೆಂಥಾ ಸಂಸ್ಕೃತಿ? ಇದು ಯಾವ ರೀತಿಯ ಅಷ್ಟಮಿ ಆಚರಣೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು