young man dances obscenely with a young woman wearing a saffron shawl

Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

ಮಂಗಳೂರು: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಈ ಘಟನೆ ದಕ್ಷಿಣ ಕನ್ನಡದಲ್ಲಿ ಸಂಭವಿಸಿದೆ.

ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ, ಧಾರ್ಮಿಕ ಮೆರವಣಿಗೆಯಲ್ಲಿ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಹುಚ್ಚಾಟ ಮೆರೆದಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ.

ವೈರಲ್ ವಿಡಿಯೋದಲ್ಲಿ ಯುವಕರ ಗುಂಪಿನ ನಡುವೆ ಒಂಟಿ ಯುವತಿಯೊಬ್ಬಳು ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸಿದ್ದಾನೆ.

ಈ ವೇಳೆ ಇರುಸುಮುರುಸುಗೊಂಡ ಯುವತಿ ಆತನನ್ನು ದೂರ ತಳ್ಳಿ ಅಲ್ಲಿಂದ ಬೇರೆಡೆ ಹೋಗಲು ಪ್ರಯತ್ನಿಸಿರುವುದನ್ನು ವಿಡಿಯೋದಲ್ಲಿ (Viral video) ನೋಡಬಹುದು.

ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಈ ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ, ದಕ್ಷಿಣ ಕನ್ನಡದಲ್ಲಿ ಇದೆಂಥಾ ಸಂಸ್ಕೃತಿ? ಇದು ಯಾವ ರೀತಿಯ ಅಷ್ಟಮಿ ಆಚರಣೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.