Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಮುದ್ದೇಬಿಹಾಳ : ಭಕ್ತಾದಿಗಳ ಸಹಾಯ, ದಾನಿಗಳ ನೆರವಿನಿಂದ ಅಂದಾಜು 70 ಲಕ್ಷ ವೆಚ್ಚದಲ್ಲಿ ಜಾತ್ರೆಗೆ ಬರುವ ಭಕ್ತರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಸತಿ ಕೊಠಡಿಗಳನ್ನು ಹೊಂದಿರುವ ಯಾತ್ರಿ ನಿವಾಸ ನಿರ್ಮಾಣ ಮಾಡಿದ್ದೇವೆ. ಕಮೀಟಿಯ ಅಧಿಕಾರ ವಹಿಸಿಕೊಂಡ ಒಂದೇ ವರ್ಷದಲ್ಲಿ ಭಕ್ತಾದಿಗಳಿಗೆ ಯಾತ್ರಿ ನಿವಾಸವನ್ನು ಮುಕ್ತಗೊಳಿಸಿದ್ದೇವೆ ಎಂದು ಕುಂಟೋಜಿ ದೇವಸ್ಥಾನ ಕಮೀಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತಾಲ್ಲೂಕಿನ ಕುಂಟೋಜಿ ದೇವಸ್ಥಾನದ ನೂತನ ಯಾತ್ರಿ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಜಾತ್ರೆಯ ಕಾರ್ಯಕ್ರಮಗಳ ವಿವರ ನೀಡಿದರು.

ಯಾತ್ರಾ ನಿವಾಸದಲ್ಲಿರುವ ಕೊಠಡಿಗಳಲ್ಲಿ ದೇಶೀಯ, ವಿದೇಶಿಯ ಮಾದರಿಯ ಶೌಚಾಲಯವನ್ನು ನಿರ್ಮಾಣ ಮಾಡಿದ್ದು ಸ್ನಾನಕ್ಕೆ ಆಧುನಿಕ ಶೈಲಿಯ ವಿನ್ಯಾಸವನ್ನು ರೂಪುಗೊಳಿಸಲಾಗಿದೆ. ಜಾತ್ರೆಗೆ ದೂರು ಊರಿಂದ ಬರುವ ಭಕ್ತರು ನೆಮ್ಮದಿಯಿಂದ ಶುಚಿತ್ವ ಕಾಪಾಡಿಕೊಂಡು ಜಾತ್ರೆಯ ವೈಭವವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಕೆಲವು ದಾನಿಗಳು ಸ್ವಯಂಪ್ರೇರಣೆಯಿಂದ ದೇವಸ್ಥಾನದ ಯಾತ್ರಾ ನಿವಾಸಕ್ಕೆ ಸಹಾಯ, ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು, ಉದ್ಯಮಿದಾರರು, ಜನಪ್ರತಿನಿಧಿಗಳು, ದೇವಸ್ಥಾನ ಕಮಿಟಿ ಪದಾಧಿಕಾರಿಗಳು ನಡೆಸಿಕೊಡಲಿದ್ದಾರೆ.

ಮುಂದಿನ ವರ್ಷ ಬಾಗಲಕೋಟೆಯ ಭಕ್ತರು ದೇವಸ್ಥಾನಕ್ಕೆ ನೂತನ ಕಟ್ಟಿಗೆಯ ರಥ ಮಾಡಿಸಿಕೊಡುವ ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಬಸವೇಶ್ವರ ಜಾತ್ರಾ ಮಹೋತ್ಸವ ಸೆ.1 ರಿಂದ 5ರವರೆಗೆ ಹಮ್ಮಿಕೊಂಡಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮಗಳ ಮಾಹಿತಿ ಒದಗಿಸಿದರು.

ದೇವಸ್ಥಾನ ಸಮೀತಿ ಸದಸ್ಯ ಸಂತೋಷ ಬಿರಾದಾರ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗೆ ಸಮಸ್ಯೆಯಾಗದಿರಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿವಿಧ ಊರುಗಳಿಂದ ಬರುವ ಸ್ಪರ್ಧಾಳುಗಳ ಅನುಕೂಲಕ್ಕೆ ಐದು ದಿನವೂ ಪ್ರಸಾದ ಸೇವೆ ಇರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಸಮಿತಿಯ ಮಲ್ಲಿಕಾರ್ಜುನ ನಾಟೇಕಾರ, ಆನಂದ ಗಸ್ತಿಗಾರ, ಬಸನಗೌಡ ಬಿರಾದಾರ,ಬಸವರಾಜ ಹುಲಗಣ್ಣಿ,ಸಿದ್ದಪ್ಪ ಹೂಗಾರ, ಮಲ್ಲಿಕಾರ್ಜುನ ಹೆಬ್ಬಾಳ, ಬಸರಕೋಡ ಹೆಸ್ಕಾಂ ಶಾಖಾಧಿಕಾರಿ ಶಿವಪ್ಪ ಆರೇಶಂಕರ, ಸಂಗಯ್ಯ ಮಠ,ವೀರಬಸ್ಸು ಊರಾನ, ಬಸಯ್ಯ ಮಠ ಮೊದಲಾದವರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ