Crime news: Extortion of a businessman at Koluru Cross.. Accused arrested

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಕ್ರಾಸ್‌ನಲ್ಲಿ ಕೊಲ್ಹಾಪುರದ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಹಣ,ಚಿನ್ನಾಭರಣ ದೋಚಿದ್ದ ಆರೋಪಿತರನ್ನು ಶನಿವಾರ ಇಲ್ಲಿನ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕೊಲ್ಹಾಪುರದ ಉದ್ಯಮಿ ಅಶೋಕ ಕುಲಕರ್ಣಿ ಎಂಬುವರು ಆ.29 ರಂದು ಮುದ್ದೇಬಿಹಾಳದಿಂದ ತಂಗಡಗಿ ಕಡೆಗೆ ತೆರಳುವಾಗ ಕೋಳೂರು ಕ್ರಾಸ್‌ಬಳಿ ಅವರ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ ಚಾಕು ತೋರಿಸಿ ಕಣ್ಣಿಗೆ ಖಾರದಪುಡಿ ಎರಚಿ ಅವರ ಬಳಿ ಇದ್ದ ಚಿನ್ನದ ಉಂಗುರು, ನಗದು ಹಣ, ಕೊರಳಲ್ಲಿದ್ದ ಚಿನ್ನದ ಸರ ಸೇರಿ ಒಟ್ಟು 61 ಸಾವಿರ ರೂ. ಮೌಲ್ಯದ ಚಿನ್ನಾಭರಣ, ನಗದು ಹಣವನ್ನು ಯಾರೋ ಇಬ್ಬರು ವ್ಯಕ್ತಿಗಳು ಸುಲಿಗೆ ಮಾಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದರ ತನಿಖೆ ನಡೆಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ ಹಾಗೂ ತಂಡದವರು, ತಾಂತ್ರಿಕ ಸಹಾಯದಿಂದ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿತರಾದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ರಾಕೇಶ ಸಾವಂತ, ರೋಹನ ಯೇಡಕರ, ಪ್ರಥಮೇಶ ಹವಾಲ್ದಾರ ಎಂಬುವರನ್ನು ಬಂಧಿಸಿ ಅವರನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯದಲ್ಲಿ ಭಾಗಿಯಾಗಿದ್ದು ತಾವೆ ಎಂದು ಒಪ್ಪಿಕೊಂಡಿದ್ದು ಅವರಿಂದ ಚಿನ್ನಾಭರಣ, ನಗದು ಹಣ, ಒಂದು ಬೈಕ್, ಮೊಬೈಲ್ ಫೋನಗಳು ಸೇರಿ ಒಟ್ಟು 1.70 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಆರೋಪಿತರನ್ನು ಪತ್ತೆ ಹಚ್ಚಲು ಶ್ರಮಿಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ವಿ.ಎನ್.ಹಾಲಗಂಗಾಧರಮಠ, ಸಿ.ಎಸ್.ಬಿರಾದಾರ, ಆರ್.ಎಸ್.ಮಾದರ, ಎಸ್.ಎಲ್.ಹತ್ತರಕಿಹಾಳ ಅವರ ತಂಡಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಬಹುಮಾನ, ಪ್ರಶಂಸನಾ ಪತ್ರ ಘೋಷಣೆ ಮಾಡಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ