Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ ಆಶೀರ್ವಚನ ನೀಡಿ ಮಾತನಾಡಿದರು.

ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಳ್ಳಲಿ. ವಿವಾಹ ಬಂಧನವೆಂದರೆ ಎರಡು ಮನಸ್ಸುಗಳು ಒಂದಾಗಿ ಪರಸ್ಪರ ಹಾಲು ಜೇನಿನಂತೆ ಜೀವನ ನಡೆಸುವುದಾಗಿದೆ. ಆದ್ದರಿಂದ ನಿಮ್ಮ ಬದುಕು ಬಂಗಾರವಾಗಲಿ ಪ್ರಗತಿಯತ್ತ ಸಾಗಲು ಹಿರಿಯರ ಮಾರ್ಗದರ್ಶನ ಅವಶ್ಯಕವಾಗಿರುತ್ತದೆ. ಸೊಸೆಯಾದವರು ಅತ್ತೆ-ಮಾವನನ್ನು ತಂದೆ-ತಾಯಿಯಂತೆ ಕಾಣಬೇಕು. ಅತ್ತೆ-ಮಾವ ಸೊಸೆಯನ್ನು ಮಗಳಂತೆ ನೋಡಿಕೊಂಡು ಹೋಗಬೇಕೆಂದು ತಿಳಿಸಿದರು.

ಚಳಗೇರಿಯ ವೀರಸಂಗಮೇಶ್ವರ ಸ್ವಾಮಿಗಳು ಮಾತನಾಡಿ ದಂಪತಿಗಳು ತಂದೆ-ತಾಯಿಗಳಲ್ಲಿ ದೇವರನ್ನು ಕಾಣಬೇಕು. ಮನೆಯ ಹಿರಿಯರನ್ನು ಗೌರವವನ್ನು ನೀಡಬೇಕು. ಅವರ ಮಾರ್ಗದರ್ಶನದಲ್ಲಿ ಜೀವನ ಸಾಗಿದರೆ ಜೀವನ ಸಾರ್ಥಕಗೊಳ್ಳುತ್ತದೆ. ಮಕ್ಕಳ ಮದುವೆ ಮಾಡಲು ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ ಎಂದರು.

ಸಂಗಮೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿ 42 ವರ್ಷದಿಂದ ನಮ್ಮ ಕಮಿಟಿಯು ಉತ್ತಮವಾಗಿ ಜಾತ್ರೆಯನ್ನು ಮುನ್ನೆಡಿಸಿಕೊಂಡು ಹೋಗುತ್ತಿದ್ದು, ಇವತ್ತು ತಾಲೂಕಿನ ಎಲ್ಲ ಸಮಾಜದ ದಾನಿಗಳ ಮತ್ತು ಭಕ್ತರ ಸಹಾಯದಿಂದ ಇಂತಹ ದೊಡ್ಡದಾದ ಸಮುದಾಯ ಭವನವನ್ನು ನಿರ್ಮಿಸಲಾಗಿದ್ದು ಮುಂದೆಯೂ ಇದೆ ರೀತಿಯಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಕಮಿಟಿಯೂ ಹೋಗುತ್ತದೆ ಎಂದು ತಿಳಿಸಿದರು.

ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠ, ವಿ.ಮ.ಬ್ಯಾಂಕ ಅಧ್ಯಕ್ಷ ಶಿವಾನಂದ ಕಂಠಿ, ನಿರ್ದೇಶಕ ರವಿ ಹುಚನೂರ, ದೇವು ಡಂಬಳ ಪುರಸಭೆ ಅಧ್ಯಕ್ಷ ಭಾಗ್ಯಶ್ರೀ ರೇವಡಿ, ಮುಸ್ಲಿಂ ಸಮಾಜದ ನೌಕರರ ಅಧ್ಯಕ್ಷ ನೂರಸಾಬ ರೋಣದ, ಪಿಎಸ್.ಐ ಚನ್ನಯ್ಯ ದೇವೂರ, ಸಂಗಮೇಶ್ವರ ದೇವಸ್ಥಾನ ಕಮಿಟಿಯ ಕಾರ್ಯದರ್ಶಿ ಅರುಣೋದಯ ದುದ್ಗಿ ಮಾತನಾಡಿದರು.

ಶ್ರೀ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಬಸವರಾಜ ಹೊಸೂರ, ನೀಲಪ್ಪ ತಪೇಲಿ, ಬಾಬು ನಾಗರಾಳ, ತಿರುಪತಿ ಕುಷ್ಟಗಿ, ಅಶೋಕ ಪಟ್ಟಣಶೆಟ್ಟಿ, ಮಹಾಂತೇ ಶ್ಯಾವಿ, ಹನಮಂತಗೌಡ ಬೆನಕನಡೋಣ , ರಾಮನಗೌಡ ಬೆಳ್ಳಿಹಾಳ, ಗಿರಿಮಲ್ಲಪ್ಪ ಹಳಪೇಟಿ, ವಿರೇಶ ಅಂಗಡಿ, ನಾರಾಯಣ ಕುರಕುಂಟಾ, ಬಸವಪ್ಪ ವಂದಾಲಿ, ಮಲ್ಲಪ್ಪ ಅಂಠರದಾನಿ, ಈಶ್ವರಪ್ಪ ಹವಾಲ್ದಾರ, ಬಸವರಾಜ ಜಮಾದರ, ನಂದಪ್ಪ ಬಾರಕೇರ, ಅಡಿವೆಪ್ಪ ಅವಾರಿ, ಸೇರಿದಂತೆ ಇತರರಿದ್ದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸಾಮೂಹಿಕ ವಿವಾಹದಲ್ಲಿ 12 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 16 ಇಷ್ಟಲಿಂಗ ಅಯ್ಯಾಚಾರ ಸಮಾರಂಭ ನಡೆಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ