What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ