What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ