What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600