Tagaru who won the competition and got on the bike

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಕುಷ್ಟಗಿ : ತಾಲೂಕಿನ ಕುಂಬಳಾವತಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಟಗರಿನ ಕಾಳಗ ಸ್ಪರ್ಧೆಯಲ್ಲಿ ಕುಷ್ಟಗಿ ಟಗರು ಸೆಣಸಾಡಿ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಹೊಸ ಬೈಕ್ ಗೆದ್ದುಕೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶ್ರಾವಣ ಮಾಸದ ನಿಮಿತ್ತ ಕುಂಬಳಾವತಿ ಗ್ರಾಮದ ಶ್ರೀದ್ಯಾಮಾಂಭಿಕಾ ದೇವಿ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಟಗರಿನ ಕಾಳಗ ಓಪನ್ ಸ್ಪರ್ಧೆ ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಕಡೆಯಿಂದ 8 ಹಲ್ಲಿನ 40ಕ್ಕೂ ಹೆಚ್ಚು ಟಗರುಗಳು ಭಾಗವಹಿಸಿದ್ದವು.

4 ಸುತ್ತುಗಳ ಈ ಸ್ಪರ್ಧೆಯಲ್ಲಿ ಬಲಾಢ್ಯ ಎದುರಾಳಿ ಟಗರು ಗಳನ್ನು ಕುಷ್ಟಗಿ ಟಗರು ಸೆಣೆಸಾಡಿ ಮಹಾ ಬಲಾಢ್ಯ ಎನಿಸಿಕೊಂಡಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಗುಡದೂರಿನ ಬಲಿಷ್ಠ ಟಗರಿನ ಜೊತೆಗೆ ತೀವ್ರ ಸೆಣಸಾಡಿ ಕೊನೆಗೆ ಗೆದ್ದ ಕುಷ್ಟಗಿ ಟಗರು, ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಹೊಸ ಬೈಕ್ ಬಹುಮಾನವಾಗಿ ಪಡೆದುಕೊಂಡಿದೆ.

ಹರ್ಷ: ರಾಜ್ಯದ ಐದು ಕಡೆಗಳಲ್ಲಿ ನಡೆದ ಓಪನ್ ಟಗರಿನ ಕಾಳಗ ಸ್ಪರ್ಧೆಯಲ್ಲಿ ನಮ್ಮ ಟಗರು ಭಾಗವಹಿಸಿತ್ತು. ಸ್ವಲ್ಪ ಅಂತರದಲ್ಲಿಯೇ ಸೋತಿತ್ತು. ಆದರೆ ಎದುರಾಳಿ ಟಗುರುಗಳಿಗೆ ಸಾಕಷ್ಟು ಹಾನಿ ಮಾಡಿತ್ತು.

ಒಟ್ಟು 5 ರಾಜ್ಯ ಮಟ್ಟದ ಕಾಳಗ ಸ್ಪರ್ಧೆಗಳಲ್ಲಿ ಎರಡರಲ್ಲಿ ಗೆದ್ದು ಬಹುಮಾನ ಗೆದ್ದುಕೊಟ್ಟಿದೆ. ಈ ಹಿಂದೆ ಸೂಳಿಬಾವಿಯಲ್ಲಿ ನಡೆದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು 30 ಸಾವಿರ ರೂ. ನಗುದು ಬಹುಮಾನಗಳಿಸಿ ಕೊಟ್ಟಿದೆ. ಮುಂದಿನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಲಿದೆ ಎಂಬ ವಿಶ್ವಾಸ ನಮಗಿತ್ತು.

ಇದನ್ನೂ ಓದಿ: Accident news: ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ಸಾವು

ಸದ್ಯದ ಕುಂಬಳಾವತಿಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ನಮಗೆ ಬಹುಮಾನವಾಗಿ ಬೈಕ್ ತಂದುಕೊಟ್ಟ ನಮ್ಮ ಬಲಾಢ್ಯ ಟಗರಿನ ಬಗ್ಗೆ ನಮಗೆ ಹೆಮ್ಮೆ ಇದೆ. ಅದನ್ನು ಪ್ರೀತಿಯಿಂದ ಗಾಂಧಿನಗರ ಗೂಳಿ ಎಂತಲೇ ಕರೆಯುತ್ತೇವೆ ಎಂದು ಹರುಷ ವ್ಯಕ್ತ ಪಡಿಸುತ್ತಾರೆ ಕುಷ್ಟಗಿ ಟಗರಿನ ಮಾಲೀಕರಾದ ಜಂಬಣ್ಣ ಡೊಳ್ಳಿನ ಸಾ.ಬೆಂಚಮಟ್ಟಿ ಹಾಗೂ ದಾವಲ್ ಕಾಯಗಡ್ಡಿ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ