CM Siddaramaiah insulted by private news channel..! Magnificent Narasimhamurthy painted by Grahachara

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

Ad
Ad

ನವದೆಹಲಿ: ಮೂಡಾ ಹಗರಣದ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯರ (CM Siddaramaiah) ಕುರಿತು ದೇಶಾದ್ಯಂತ ಚರ್ಚೆ ಜೋರಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಕುರಿತು ಖಾಸಗಿ ಸುದ್ದಿ ವಾಹಿನಿಗಳು ಡಿಬೆಟ್ ಮೇಲೆ ಡಿಬೆಟ್ ನಡೆಸುತ್ತಿವೆ. ಹೀಗೆ ಡಿಬೆಟ್ ನಡೆಸುತ್ತಿದ್ದ ಖ್ಯಾತ ಸುದ್ದಿ ವಾಹಿನಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿತು. ಆಗ ಡಿಬೆಟ್‌ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಮೂರ್ತಿ ಅವರಿಂದ ಛೀಮಾರಿ ಹಾಕಿದ್ದಾರೆ.

ಖ್ಯಾತ ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿಯಲ್ಲಿ ಮೂಡಾ ಹಗರಣದ ಡಿಬೆಟ್ ವೇಳೆ ಸುದ್ದಿ ವಾಹನಿ ಟ್ಯಾಗ್ಲೈನ್ ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಸಿದ್ದ ಎಂದು ನಮೂದಿಸಿದ್ದು, ಡಿಬೆಟ್ ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರನ್ನು ಕೆರಳಿಸಿದೆ.

ಡಿಬೆಟ್ ನಲ್ಲಿ ಮಾತನಾಡುವ ಸರದಿ ಬರುವವರೆಗೆ ತಾಳ್ಮೆಯಿಂದ ಕಾದ ಭವ್ಯ ನರಸಿಂಹಮೂರ್ತಿ, ನ್ಯೂಸ್ ಆ್ಯಂಕರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳನ್ನು ಸಿದ್ದ ಎಂದು ನಿಮ್ಮ ಸುದ್ದಿ ವಾಹಿನಿ ಅವಹೇಳನಕಾರಿಯಾಗಿ ಉಲ್ಲೇಖಿಸುವುದನ್ನು ಸಹಿಸಲು ಸಾಧ್ಯವಿಲ್ಲ, ಇದು ಗೌರವವಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವೇಂದು ನರೇಂದ್ರ, ನರೇನ್ ಎಂದು ಹೆಸರನ್ನು ಬಳಸುವುದಿಲ್ಲ. ನರೇಂದ್ರ ಮೋದಿ ಅವರಿಗೆ ಕೊನೆಯ ಹೆಸರಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕೊನೆಯ ಹೆಸರಿಲ್ಲ. ಈ ಕೂಡಲೇ ಸಿದ್ದರಾಮಯ್ಯ ಅವರನ್ನು ಗೌರವ ಪೂರ್ವಕವಾಗಿ ಪೂರ್ತಿಯಾಗಿ ಬಳಸಬೇಕು ಎಂದು ತಾಕೀತು ಮಾಡಿದರು‌.

ಸಿದ್ದರಾಮಯ್ಯ ಅವರು ಕರ್ನಾಟಕದ ಹಿರಿಯ ಮುಖಂಡರಾಗಿದ್ದಾರೆ. ಸಾಂವಿಧಾನಿಕವಾಗಿ ಉನ್ನತ ಹುದ್ದೆಯಲ್ಲಿದ್ದಾರೆ ಎಂಬುದನ್ನು ತಿಳಿಯಬೇಕೆಂದು ಆಗ್ರಹಿಸಿದರು.

ಕೂಡಲೇ ಆದ ತಪ್ಪಿಂದ ಹೆಚ್ಚೆತ್ತ ಸುದ್ದಿ ವಾಹಿನಿ ಆ್ಯಂಕರ್ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ‌.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500