CM Siddaramaiah insulted by private news channel..! Magnificent Narasimhamurthy painted by Grahachara

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

ನವದೆಹಲಿ: ಮೂಡಾ ಹಗರಣದ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯರ (CM Siddaramaiah) ಕುರಿತು ದೇಶಾದ್ಯಂತ ಚರ್ಚೆ ಜೋರಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಕುರಿತು ಖಾಸಗಿ ಸುದ್ದಿ ವಾಹಿನಿಗಳು ಡಿಬೆಟ್ ಮೇಲೆ ಡಿಬೆಟ್ ನಡೆಸುತ್ತಿವೆ. ಹೀಗೆ ಡಿಬೆಟ್ ನಡೆಸುತ್ತಿದ್ದ ಖ್ಯಾತ ಸುದ್ದಿ ವಾಹಿನಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿತು. ಆಗ ಡಿಬೆಟ್‌ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಮೂರ್ತಿ ಅವರಿಂದ ಛೀಮಾರಿ ಹಾಕಿದ್ದಾರೆ.

ಖ್ಯಾತ ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿಯಲ್ಲಿ ಮೂಡಾ ಹಗರಣದ ಡಿಬೆಟ್ ವೇಳೆ ಸುದ್ದಿ ವಾಹನಿ ಟ್ಯಾಗ್ಲೈನ್ ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಸಿದ್ದ ಎಂದು ನಮೂದಿಸಿದ್ದು, ಡಿಬೆಟ್ ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರನ್ನು ಕೆರಳಿಸಿದೆ.

ಡಿಬೆಟ್ ನಲ್ಲಿ ಮಾತನಾಡುವ ಸರದಿ ಬರುವವರೆಗೆ ತಾಳ್ಮೆಯಿಂದ ಕಾದ ಭವ್ಯ ನರಸಿಂಹಮೂರ್ತಿ, ನ್ಯೂಸ್ ಆ್ಯಂಕರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳನ್ನು ಸಿದ್ದ ಎಂದು ನಿಮ್ಮ ಸುದ್ದಿ ವಾಹಿನಿ ಅವಹೇಳನಕಾರಿಯಾಗಿ ಉಲ್ಲೇಖಿಸುವುದನ್ನು ಸಹಿಸಲು ಸಾಧ್ಯವಿಲ್ಲ, ಇದು ಗೌರವವಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವೇಂದು ನರೇಂದ್ರ, ನರೇನ್ ಎಂದು ಹೆಸರನ್ನು ಬಳಸುವುದಿಲ್ಲ. ನರೇಂದ್ರ ಮೋದಿ ಅವರಿಗೆ ಕೊನೆಯ ಹೆಸರಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕೊನೆಯ ಹೆಸರಿಲ್ಲ. ಈ ಕೂಡಲೇ ಸಿದ್ದರಾಮಯ್ಯ ಅವರನ್ನು ಗೌರವ ಪೂರ್ವಕವಾಗಿ ಪೂರ್ತಿಯಾಗಿ ಬಳಸಬೇಕು ಎಂದು ತಾಕೀತು ಮಾಡಿದರು‌.

ಸಿದ್ದರಾಮಯ್ಯ ಅವರು ಕರ್ನಾಟಕದ ಹಿರಿಯ ಮುಖಂಡರಾಗಿದ್ದಾರೆ. ಸಾಂವಿಧಾನಿಕವಾಗಿ ಉನ್ನತ ಹುದ್ದೆಯಲ್ಲಿದ್ದಾರೆ ಎಂಬುದನ್ನು ತಿಳಿಯಬೇಕೆಂದು ಆಗ್ರಹಿಸಿದರು.

ಕೂಡಲೇ ಆದ ತಪ್ಪಿಂದ ಹೆಚ್ಚೆತ್ತ ಸುದ್ದಿ ವಾಹಿನಿ ಆ್ಯಂಕರ್ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ‌.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ