Over 500 deaths in road accidents in one year: SP Rishikesh Sonana

ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ 2023 ರಲ್ಲಿ 443 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ಸುಮಾರು 500ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವಿಜಯಪುರ ಎಸ್ಪಿ ಋಷಿಕೇಶ ಸೋನಾವಣೆ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕುಂಟೋಜಿ ಜಾತ್ರೆಗೆ ಬಂದಿದ್ದ ಯುವಕರು ರಸ್ತೆ ಬದಿ ಇಳಿದಿದ್ದಾಗ ವೇಗವಾಗಿ ಬಂದಿರುವ ಬೈಕ್ ಅವರಿಗೆ ಅಪ್ಪಳಿಸಿ ದುರ್ಘಟನೆ ಸಂಭವಿಸಿದೆ. ರಾಜ್ಯ ಹೆದ್ದಾರಿಗಳ ಮೇಲೆ ಸಂಚರಿಸುವ ವೇಳೆ ಬೈಕ್ ಸವಾರರು ಕನಿಷ್ಠ ಹೆಲ್ಮೆಟ್ ಧರಿಸಿ ಪ್ರಯಾಣ ಮಾಡಬೇಕು. ಇಲ್ಲದಿದ್ದಲ್ಲಿ ಅಪಘಾತಗಳಿಗೆ ಸಿಲುಕಿ ಅಮೂಲ್ಯ ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿ ನಿಮ್ಮನ್ನು ನಂಬಿದವರ ಕುಟುಂಬಗಳಿಗೆ ನೋವು ಕೊಡುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಬಳಿ ಸಂಭವಿಸಿರುವ ಅಪಘಾತ ಈಚೇಗಿನ ದಿನಗಳಲ್ಲಿ ದೊಡ್ಡ ಘಟನೆಯಾಗಿದೆ. ಬಿಸಿಲಿನ ನೆಪ ಮಾಡಿಯೋ ಇನ್ನಾವುದೇ ಕಾರಣದಿಂದಲೋ ಹೆಲ್ಮೆಟ್ ಧರಿಸದೇ ಇರುವುದು ಈ ರೀತಿ ಜೀವಕ್ಕೆ ಆಪತ್ತು ತರುವ ಘಟನೆಗಳಾಗಲು ಕಾರಣವಾಗುತ್ತದೆ ಎಂದರು.

ರಸ್ತೆ ಬದಿ ನಡೆದುಕೊಂಡು ಹೋಗುವವರು ಮುನ್ನೆಚ್ಚರಿಕೆ ವಹಿಸಬೇಕು. ಕನಿಷ್ಠ ಮೊಬೈಲ್ ಟಾರ್ಚ್ನ್ನಾದರೂ ಹಚ್ಚಿಕೊಂಡು ತಿರುಗಾಡಬೇಕು. ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾದರೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ಬಹುಮುಖ್ಯವಾಗುತ್ತದೆ ಎಂದು ಹೇಳಿದರು.

18 ವರ್ಷ ವಯಸ್ಸಿನ ಒಳಗಿನವರಿಗೆ ಬೈಕ್ ಓಡಿಸಲು ಕೊಟ್ಟರೆ ಅವರ ತಂದೆ ತಾಯಿ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಟಂಟಂ, ಗೂಡ್ಸ್ ವಾಹನಗಳ ವಾಹನ ಚಾಲಕರಿಗೂ ರಸ್ತೆ ನಿಯಮಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸೂಚನೆಗಳನ್ನು ನೀಡಿರುತ್ತೇವೆ. ಬೈಕ್ ಸವಾರರು ಹೆಲ್ಮೆಟ್ ಧರಿಸಬೇಕು, ಗೂಡ್ಸ್ ಚಾಲಕರು ಸಾರಿಗೆ ನಿಯಮಗಳಂತೆ ವಾಹನಗಳನ್ನು ಓಡಿಸಬೇಕು. ಅಪಘಾತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಮಾಯಕರ ಜೀವ ಹಾನಿ ತಪ್ಪಿಸಬೇಕು ಎಂದು ಎಸ್ಪಿ ತಿಳಿಸಿದರು.

ಅಪಘಾತದ ಸ್ಥಳಕ್ಕೆ ಎಸ್ಪಿ ಭೇಟಿ:

ಕುಂಟೋಜಿ ಸಮೀಪದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಇದ್ದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ