Over 500 deaths in road accidents in one year: SP Rishikesh Sonana

ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ 2023 ರಲ್ಲಿ 443 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ಸುಮಾರು 500ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವಿಜಯಪುರ ಎಸ್ಪಿ ಋಷಿಕೇಶ ಸೋನಾವಣೆ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕುಂಟೋಜಿ ಜಾತ್ರೆಗೆ ಬಂದಿದ್ದ ಯುವಕರು ರಸ್ತೆ ಬದಿ ಇಳಿದಿದ್ದಾಗ ವೇಗವಾಗಿ ಬಂದಿರುವ ಬೈಕ್ ಅವರಿಗೆ ಅಪ್ಪಳಿಸಿ ದುರ್ಘಟನೆ ಸಂಭವಿಸಿದೆ. ರಾಜ್ಯ ಹೆದ್ದಾರಿಗಳ ಮೇಲೆ ಸಂಚರಿಸುವ ವೇಳೆ ಬೈಕ್ ಸವಾರರು ಕನಿಷ್ಠ ಹೆಲ್ಮೆಟ್ ಧರಿಸಿ ಪ್ರಯಾಣ ಮಾಡಬೇಕು. ಇಲ್ಲದಿದ್ದಲ್ಲಿ ಅಪಘಾತಗಳಿಗೆ ಸಿಲುಕಿ ಅಮೂಲ್ಯ ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿ ನಿಮ್ಮನ್ನು ನಂಬಿದವರ ಕುಟುಂಬಗಳಿಗೆ ನೋವು ಕೊಡುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಬಳಿ ಸಂಭವಿಸಿರುವ ಅಪಘಾತ ಈಚೇಗಿನ ದಿನಗಳಲ್ಲಿ ದೊಡ್ಡ ಘಟನೆಯಾಗಿದೆ. ಬಿಸಿಲಿನ ನೆಪ ಮಾಡಿಯೋ ಇನ್ನಾವುದೇ ಕಾರಣದಿಂದಲೋ ಹೆಲ್ಮೆಟ್ ಧರಿಸದೇ ಇರುವುದು ಈ ರೀತಿ ಜೀವಕ್ಕೆ ಆಪತ್ತು ತರುವ ಘಟನೆಗಳಾಗಲು ಕಾರಣವಾಗುತ್ತದೆ ಎಂದರು.

ರಸ್ತೆ ಬದಿ ನಡೆದುಕೊಂಡು ಹೋಗುವವರು ಮುನ್ನೆಚ್ಚರಿಕೆ ವಹಿಸಬೇಕು. ಕನಿಷ್ಠ ಮೊಬೈಲ್ ಟಾರ್ಚ್ನ್ನಾದರೂ ಹಚ್ಚಿಕೊಂಡು ತಿರುಗಾಡಬೇಕು. ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾದರೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ಬಹುಮುಖ್ಯವಾಗುತ್ತದೆ ಎಂದು ಹೇಳಿದರು.

18 ವರ್ಷ ವಯಸ್ಸಿನ ಒಳಗಿನವರಿಗೆ ಬೈಕ್ ಓಡಿಸಲು ಕೊಟ್ಟರೆ ಅವರ ತಂದೆ ತಾಯಿ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಟಂಟಂ, ಗೂಡ್ಸ್ ವಾಹನಗಳ ವಾಹನ ಚಾಲಕರಿಗೂ ರಸ್ತೆ ನಿಯಮಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸೂಚನೆಗಳನ್ನು ನೀಡಿರುತ್ತೇವೆ. ಬೈಕ್ ಸವಾರರು ಹೆಲ್ಮೆಟ್ ಧರಿಸಬೇಕು, ಗೂಡ್ಸ್ ಚಾಲಕರು ಸಾರಿಗೆ ನಿಯಮಗಳಂತೆ ವಾಹನಗಳನ್ನು ಓಡಿಸಬೇಕು. ಅಪಘಾತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಮಾಯಕರ ಜೀವ ಹಾನಿ ತಪ್ಪಿಸಬೇಕು ಎಂದು ಎಸ್ಪಿ ತಿಳಿಸಿದರು.

ಅಪಘಾತದ ಸ್ಥಳಕ್ಕೆ ಎಸ್ಪಿ ಭೇಟಿ:

ಕುಂಟೋಜಿ ಸಮೀಪದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ