Ettinhole yojane: Another guarantee announced by CM Siddaramaiah

Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

ಹಾಸನ: ಎತ್ತಿನಹೊಳೆ (Ettinholr yojane) ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಭರವಸೆಯಿಂದ ನೀಡಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ‌ಚಾನೆಲ್ ಗೆ ಸೇರಿ: https://t.me/dcgkannada

ಎತ್ತಿನಹೊಳೆ (Ettinhole yojane) ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ: ಉಪನ್ಯಾಸಕಿ ಸೇರಿ ಮೂವರ ದುರ್ಮರಣ

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

Latest News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.