Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

Ad
Ad

ವಿಷೇಶ ಲೇಖನ: ರೇವಣಸಿದ್ದ ಬಗಲಿ

Ad
Ad

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500