Astrology Image of astrology

ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಮೇಷ ರಾಶಿ: ನಿಮ್ಮ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ.ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಷಭ ರಾಶಿ: ಇಂದು ಕೆಲವು ಸವಾಲುಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿದ್ದರೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದ ರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು.ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು.ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ .
(ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಸಿಂಹ ರಾಶಿ: ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು.ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವುದು.ನವಗ್ರಹ ಸ್ತೋತ್ರ ಪಠಿಸಿರಿ .(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು).

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ .ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗು ವರು.ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜನರಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ .(ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ .ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಧನಸ್ಸು ರಾಶಿ:ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆ ಯು ಗೌರವ ಆದರಗಳನ್ನು ತಂದು ಕೊಡುವುದು.ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮಕರ ರಾಶಿ:ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣ ವಾಗುವುದು .ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು).

ಕುಂಭ ರಾಶಿ:ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ.ಪ್ರಶಂಸೆಗಳ ಸುರಿಮಳೆ ಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮೀನ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸು ವಿರಿ.ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು.ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ.
ಆರ್ಥಿಕ ಸ್ಥಿತಿ ಉತ್ತಮವಾಗಿರುವುದು .(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತಿಥಿ : ಚತುರ್ಥಿ
ನಕ್ಷತ್ರ : ಚಿತ್ತ ನಕ್ಷತ್ರ. ‌

ವಿನಾಯಕ ಕೂರಿಸಲು ಒಳ್ಳೆಯ ಸಮಯ :
05:00AM ರಿಂದ 07:00AM
08:00AM ರಿಂದ 09:00AM
10:30AM ರಿಂದ 12:00PM
04:00PM ರಿಂದ 5:30PM

ಈ ದಿನ ಸಂಜೆ ಚಂದ್ರನನ್ನು ನೋಡಬಾರದು.

ರಾಹುಕಾಲ:09:00AM ರಿಂದ 10:30AM
ಗುಳಿಕಕಾಲ:06:00AM ರಿಂದ 07:30AM
ಯಮಗಂಡಕಾಲ:01:30PM ರಿಂದ 03:00PM

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ