Rape in broad daylight in the middle of the road

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಕೋಲಾರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪೋಕೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಾರಾಸಗಟಾಗಿ ತಿರಸ್ಕರಿಸಿದೆ.

ಪೋಕೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸು ವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12ರಡಿ ಶಿಕ್ಷಾರ್ಹವಾಗಿದೆ.

ಪ್ರಕರಣದ ತನಿಖೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ದಾಖಲೆಗಳ ಪ್ರಕಾರ, ಅರ್ಜಿದಾರ ಐದು ಮೊಬೈಲ್ ಫೋನ್ ಹೊಂದಿದ್ದಾರೆ. ಪ್ರತಿ ಮೊಬೈಲ್‌ನಲ್ಲೂ ಸುಮಾರು ಒಂದು ಸಾವಿರ ಚಿತ್ರ ಮತ್ತು ಸಾವಿರಾರು ವಿಡಿಯೋಗಳಿರುವುದು ಆಘಾತ ಮೂಡಿಸಿದೆ.

ಇಷ್ಟು ಮೊಬೈಲ್‌ಗಳನ್ನು ಓರ್ವ ಚಿತ್ರಕಲಾ ಶಿಕ್ಷಕ ಏಕೆ ಹೊಂದಿದ್ದ? ಆ ವಿಡಿಯೋ ಹಾಗೂ ಚಿತ್ರಗಳು ಯಾವುವು? ಎಂಬುದುಪೂರ್ಣ ಪ್ರಮಾಣದತನಿಖೆ ಮತ್ತು ವಿಚಾರಣೆಯಿಂದಬಹಿರಂಗವಾಗಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಅರ್ಜಿದಾರನ ಕೃತ್ಯವು ಭಯಾನಕತೆಗಿಂತ ಹೆಚ್ಚಿನ ಛಾಯೆ ಹೊಂದಿದೆ. ಒಬ್ಬ ಶಿಕ್ಷಕನಾಗಿ ಇಂತಹ ವಿಡಿಯೋ ಚಿತ್ರೀಕರಿಸಿರುವುದು ನಿಜಕ್ಕೂ ಅಸಭ್ಯ. ಶಿಕ್ಷಕನ ಈ ಕೃತ್ಯ ಕ್ಷಮಿಸುವಂಥದ್ದಲ್ಲ. ಈ ಕೃತ್ಯವಲ್ಲದೆ ಮತ್ಯಾವುದು ಅಪರಾಧವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಅರ್ಜಿದಾರ ಪೂರ್ಣ ಪ್ರಮಾಣದ ವಿಚಾರಣೆಯಿಂದ ಆರೋಪಮುಕ್ತವಾಗಿ ಬರಲಿ. ಅದು ಬಿಟ್ಟು ಈ ಹಂತದಲ್ಲಿ ಪ್ರಕರಣ ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತೀಕ್ಷ್ಮವಾಗಿ ನುಡಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.

ಪ್ರಕರಣವೇನು?:

ಕೋಲಾರಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕನಾಗಿ ಮುನಿಯಪ್ಪ ನೇಮಕಗೊಂಡಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ವಸತಿ ಶಾಲೆಯಲ್ಲಿ ಬಟ್ಟೆ ಬದಲಿಸುವ ಸಮಯದಲ್ಲಿ ಬಾಲಕಿಯರ ಚಿತ್ರ ಹಾಗೂ ವಿಡಿಯೋವನ್ನು ತೆಗೆದ ಆರೋಪದ ಮೇಲೆ ಅರ್ಜಿದಾರರ ಬಗ್ಗೆ 2023ರ ಡಿ.15ರಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ನಿಯಂತ್ರಣ ಕೊಠಡಿ ಮೂಲಕ ದೂರು ಸ್ವೀಕರಿಸಿದ್ದರು. ನಂತರ ಮಾಸ್ತಿ ಪೊಲೀಸ್ ಠಾಣೆಯಲ್ಲಿ 2023ರ ಡಿ.17ರಂದು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಈ ಎಫ್‌ಐಆರ್ ಮತ್ತು ಆ ಕುರಿತ ಕೋಲಾರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಟೋ ವಿಶೇಷ ಕೋರ್ಟ್)ದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮುನಿಯಪ್ಪ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ