Rape in broad daylight in the middle of the road

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಕೋಲಾರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪೋಕೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಾರಾಸಗಟಾಗಿ ತಿರಸ್ಕರಿಸಿದೆ.

ಪೋಕೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸು ವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12ರಡಿ ಶಿಕ್ಷಾರ್ಹವಾಗಿದೆ.

ಪ್ರಕರಣದ ತನಿಖೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ದಾಖಲೆಗಳ ಪ್ರಕಾರ, ಅರ್ಜಿದಾರ ಐದು ಮೊಬೈಲ್ ಫೋನ್ ಹೊಂದಿದ್ದಾರೆ. ಪ್ರತಿ ಮೊಬೈಲ್‌ನಲ್ಲೂ ಸುಮಾರು ಒಂದು ಸಾವಿರ ಚಿತ್ರ ಮತ್ತು ಸಾವಿರಾರು ವಿಡಿಯೋಗಳಿರುವುದು ಆಘಾತ ಮೂಡಿಸಿದೆ.

ಇಷ್ಟು ಮೊಬೈಲ್‌ಗಳನ್ನು ಓರ್ವ ಚಿತ್ರಕಲಾ ಶಿಕ್ಷಕ ಏಕೆ ಹೊಂದಿದ್ದ? ಆ ವಿಡಿಯೋ ಹಾಗೂ ಚಿತ್ರಗಳು ಯಾವುವು? ಎಂಬುದುಪೂರ್ಣ ಪ್ರಮಾಣದತನಿಖೆ ಮತ್ತು ವಿಚಾರಣೆಯಿಂದಬಹಿರಂಗವಾಗಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಅರ್ಜಿದಾರನ ಕೃತ್ಯವು ಭಯಾನಕತೆಗಿಂತ ಹೆಚ್ಚಿನ ಛಾಯೆ ಹೊಂದಿದೆ. ಒಬ್ಬ ಶಿಕ್ಷಕನಾಗಿ ಇಂತಹ ವಿಡಿಯೋ ಚಿತ್ರೀಕರಿಸಿರುವುದು ನಿಜಕ್ಕೂ ಅಸಭ್ಯ. ಶಿಕ್ಷಕನ ಈ ಕೃತ್ಯ ಕ್ಷಮಿಸುವಂಥದ್ದಲ್ಲ. ಈ ಕೃತ್ಯವಲ್ಲದೆ ಮತ್ಯಾವುದು ಅಪರಾಧವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಅರ್ಜಿದಾರ ಪೂರ್ಣ ಪ್ರಮಾಣದ ವಿಚಾರಣೆಯಿಂದ ಆರೋಪಮುಕ್ತವಾಗಿ ಬರಲಿ. ಅದು ಬಿಟ್ಟು ಈ ಹಂತದಲ್ಲಿ ಪ್ರಕರಣ ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತೀಕ್ಷ್ಮವಾಗಿ ನುಡಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.

ಪ್ರಕರಣವೇನು?:

ಕೋಲಾರಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕನಾಗಿ ಮುನಿಯಪ್ಪ ನೇಮಕಗೊಂಡಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ವಸತಿ ಶಾಲೆಯಲ್ಲಿ ಬಟ್ಟೆ ಬದಲಿಸುವ ಸಮಯದಲ್ಲಿ ಬಾಲಕಿಯರ ಚಿತ್ರ ಹಾಗೂ ವಿಡಿಯೋವನ್ನು ತೆಗೆದ ಆರೋಪದ ಮೇಲೆ ಅರ್ಜಿದಾರರ ಬಗ್ಗೆ 2023ರ ಡಿ.15ರಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ನಿಯಂತ್ರಣ ಕೊಠಡಿ ಮೂಲಕ ದೂರು ಸ್ವೀಕರಿಸಿದ್ದರು. ನಂತರ ಮಾಸ್ತಿ ಪೊಲೀಸ್ ಠಾಣೆಯಲ್ಲಿ 2023ರ ಡಿ.17ರಂದು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಈ ಎಫ್‌ಐಆರ್ ಮತ್ತು ಆ ಕುರಿತ ಕೋಲಾರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಟೋ ವಿಶೇಷ ಕೋರ್ಟ್)ದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮುನಿಯಪ್ಪ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

Latest News

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂಬ ಸದುದ್ಧೇಶದಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಾದ್ಯಾಂತ ಜೂ.1 ರಿಂದ ಸರ್ಕಾರಿ ಶಾಲೆಗಳ ಆರಂಭೋತ್ಸವಕ್ಕೆ ಸೂಚನೆ ನೀಡಿದಂತೆ ತಾಲ್ಲೂಕಿನೆಲ್ಲೆಡೆ ವೈಭವದಿಂದ ಶಾಲೆಗಳನ್ನು ಶಿಕ್ಷಕರು ಆರಂಭಿಸಿದ್ದಾರೆ. ಕೆಲವಡೆ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾಗಿರುವ ಪಠ್ಯಪುಸ್ತಕಗಳು,ಬಟ್ಟೆ ಕೊಟ್ಟು ಸ್ವಾಗತಿಸಿಕೊಂಡರೆ ಇನ್ನು ಕೆಲವೆಡೆ ಶಾಲಾ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ಊರಿನ ತುಂಬೆಲ್ಲ ಮೆರವಣಿಗೆ ನಡೆಸಿ