Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ