Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಮುದ್ದೇಬಿಹಾಳ : ಭೋವಿ ವಡ್ಡರ ಸಮಾಜದಲ್ಲಿ ಸಾಂಪ್ರದಾಯಿಕ ಕುಲಕಸುಬು ಪ್ರಧಾನವಾಗಿದ್ದರೂ ಸಮಾಜದ ಬಾಂಧವರ ಮಕ್ಕಳು

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸುಗ್ರೀವಾಜ್ಞೆಗೆ ಅಂಕಿತ

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸುಗ್ರೀವಾಜ್ಞೆಗೆ ಅಂಕಿತ

ಬೆಂಗಳೂರು, ಮೇ 29: ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ

ವಿಎಚ್‌ಪಿ ಮುಖಂಡ ಗೋಪಾಲಜೀ ಭೇಟಿ

ವಿಎಚ್‌ಪಿ ಮುಖಂಡ ಗೋಪಾಲಜೀ ಭೇಟಿ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ವಿ.ಎಚ್.ಪಿ ಸಹ ಕಾರ್ಯದರ್ಶಿ, ಅಯೋಧ್ಯಾ ಶ್ರೀ ರಾಮ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಹುಣಸಗಿ : ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ನೌಕರರ ಸಂಘ ಬೆಂಗಳೂರು ಅರ್ಜಿ ಅಹ್ವಾನಿಸಿದ್ದು ಸೂಕ್ತ ಪ್ರಕಟಣೆಗೆ ಒಳಪಡುವಂತೆ ಎಸ್ ಎಸ್ ಎಲ್ ಸಿ ಪಿಯುಸಿಯಲ್ಲಿ ಶೇಕಡ 90% ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ 31 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ನೊಂದಾಯಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಂಬ್ರೇಶ ಮಾಲಗತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024 - 25 ನೇ ಸಾಲಿನಲ್ಲಿ

ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಬೆಂಗಳೂರು ಮೇ, 27: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಮಂಡಳಿ ರಚನೆಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ. ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆಯ ಕ್ರಮಕ್ಕೆ ಇದರಿಂದ ಬಲ ಬಂದಂತಾಗಿದೆ. ಗಿಗ್ ಕಾರ್ಮಿಕರಿಗೆ ಮಂಡಳಿಯ ರಚನೆ ಜೊತೆಗೆ ಕ್ಷೇಮಾಭಿವೃದ್ಧಿ ನಿಧಿ ಸ್ಥಷ್ಟಿಸಲು ಇದೀಗ ಅವಕಾಶ ಸಿಕ್ಕಿದೆ. ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ ಬರುವಲ್ಲಿ ಕಾರ್ಮಿಕ