One police constable is enough to arrest Kumaraswamy.. CM hits back at HDK

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

ಬೆಂಗಳೂರು: ಬಹುತೇಕ ನ್ಯೂಸ್ ಚಾನೆಲ್‌ಗಳು (News chanel) ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದ್ದು, ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ಪೆಟ್ಟುಕೊಡಲು ಸಿದ್ಧತೆ ನಡೆಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಟಿವಿ ಚಾನೆಲ್‌ಗಳ ವಿರುದ್ಧ ಕಾಂಗ್ರೆಸ್ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದೆಯಂತೆ. ಅಂದಹಾಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರೈಸಿದ್ದು, ಇದೀಗ 2ನೇ ವರ್ಷ ಪೂರೈಸುವತ್ತ ಮುನ್ನಡೆದಿದೆ. ಹೀಗಿದ್ದಾಗಲೇ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ & ಜೆಡಿಎಸ್ ನಾಯಕರು ಸಾಲು ಸಾಲು ಗಂಭೀರ ಆರೋಪಗಳನ್ನ ಮಾಡುತ್ತಿದ್ದಾರೆ.

ಅದರಲ್ಲೂ ‘ಮುಡಾ’ ಸೈಟ್ ಹಗರಣ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ಪ್ರಮುಖರ ವಿರುದ್ಧವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ಸಂಘಟಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಮಾಧ್ಯಮಗಳು ಕೂಡ ಮುಖ್ಯವಾಗಿ ಕನ್ನಡ ನಾಡಿನ ಟಿವಿ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದೆ.

ಚಾನೆಲ್‌ಗಳಿಗೆ ಆಘಾತ!

15 ವರ್ಷಗಳ ಹಿಂದೆ ಕನ್ನಡದಲ್ಲಿ ನ್ಯೂಸ್ ಚಾನೆಲ್ ಗಳನ್ನು ಭೂತ ಕನ್ನಡಿ ಹಿಡಿದು ಟಿವಿ ಸ್ಕ್ರೀನ್ ನೋಡಿ ಹುಡಕಾಡಬೇಕಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಕನ್ನಡದಲ್ಲಿ ನೂರಾರು ನ್ಯೂಸ್ ಚಾನೆಲ್ ಇವೆ. ಹೀಗಿದ್ದರೂ ಬಹುತೇಕ ಕನ್ನಡದ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರೋಧಿ ಸುದ್ದಿ ಪ್ರಕಟ ಮಾಡುತ್ತಿವೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಹೀಗಾಗಿ, ಹೊಸ ಪ್ಲಾನ್ ಮಾಡಿದೆ ಕರ್ನಾಟಕ ಕಾಂಗ್ರೆಸ್. ಕರ್ನಾಟಕ ಕಾಂಗ್ರೆಸ್ ಈಗ ಮಾಡಿಕೊಂಡ ಪ್ಲಾನ್ ಪ್ರಕಾರ, ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ನ್ಯೂಸ್ ಚಾನೆಲ್ ಕನ್ನಡದಲ್ಲಿ ಆರಂಭ ಮಾಡಲು ಚಿಂತನೆ ನಡೆದಿದೆ. ಹಾಗೇ, ಇಂಗ್ಲಿಷ್ ಭಾಷೆಯಲ್ಲೂ ಚಾನೆಲ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಕಡೆ ನ್ಯೂಸ್ ಪೇಪರ್ ಒಂದನ್ನು ಕರ್ನಾಟಕ ಕಾಂಗ್ರೆಸ್ ವತಿಯಿಂದ ಆರಂಭ ಮಾಡೋದಕ್ಕೆ ಚರ್ಚೆಗಳು ನಡೆದಿವೆಯಂತೆ. ಹೀಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಂತ ನ್ಯೂಸ್ ಚಾನೆಲ್ ಅಥವಾ ಮಾಧ್ಯಮ ಸಂಸ್ಥೆ ಆರಂಭ ಮಾಡುವ ಬಗ್ಗೆ ನಡೆದಿರುವ ಚಿಂತನೆ ಕುರಿತು ಇದೀಗ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮಾಹಿತಿ ನಿಡಿದ್ದಾರೆ.

ಪ್ಲಾನ್ ಜಾರಿ ಆಗುತ್ತಾ?

ಕನ್ನಡ ನ್ಯೂಸ್ ಚಾನೆಲ್‌ಗಳು ತಮ್ಮ ವಿರುದ್ಧ ಬೇಕು ಅಂತಲೇ ಸುದ್ದಿಯನ್ನ ಮಾಡುತ್ತಿವೆ. ಇದರ ಹಿಂದೆ ಖುದ್ದು ಬಿಜೆಪಿ ನಾಯಕರ & ಜೆಡಿಎಸ್ ನಾಯಕರ ಕುತಂತ್ರವು ಅಡಗಿದೆ ಎಂಬ ಆರೋಪವು ಕರ್ನಾಟಕ ಕಾಂಗ್ರೆಸ್ ನಾಯಕರದ್ದು.

ಇದನ್ನೂ ಓದಿ: ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ಪರಿಸ್ಥಿತಿ ಹೀಗಿದ್ದಾಗಲೇ ಸ್ವಂತ ಮಾಧ್ಯಮ ಸಂಸ್ಥೆ ಆರಂಭ ಮಾಡಿ ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟುವ ಐಡಿಯಾ ಕರ್ನಾಟಕ ಕಾಂಗ್ರೆಸ್ ನಾಯಕರದ್ದಾಗಿದೆ. ಆದರೆ, ಈ ಪ್ಲಾನ್ ಯಾವಾಗ ಜಾರಿ ಆಗುತ್ತೆ? ಅಥವಾ ಜಾರಿ ಆಗುವ ಮೊದಲೇ ಐಡಿಯಾ ಮುಗಿದು ಹೋಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು