One police constable is enough to arrest Kumaraswamy.. CM hits back at HDK

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

ಬೆಂಗಳೂರು: ಬಹುತೇಕ ನ್ಯೂಸ್ ಚಾನೆಲ್‌ಗಳು (News chanel) ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದ್ದು, ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ಪೆಟ್ಟುಕೊಡಲು ಸಿದ್ಧತೆ ನಡೆಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಟಿವಿ ಚಾನೆಲ್‌ಗಳ ವಿರುದ್ಧ ಕಾಂಗ್ರೆಸ್ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದೆಯಂತೆ. ಅಂದಹಾಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರೈಸಿದ್ದು, ಇದೀಗ 2ನೇ ವರ್ಷ ಪೂರೈಸುವತ್ತ ಮುನ್ನಡೆದಿದೆ. ಹೀಗಿದ್ದಾಗಲೇ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ & ಜೆಡಿಎಸ್ ನಾಯಕರು ಸಾಲು ಸಾಲು ಗಂಭೀರ ಆರೋಪಗಳನ್ನ ಮಾಡುತ್ತಿದ್ದಾರೆ.

ಅದರಲ್ಲೂ ‘ಮುಡಾ’ ಸೈಟ್ ಹಗರಣ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ಪ್ರಮುಖರ ವಿರುದ್ಧವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ಸಂಘಟಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಮಾಧ್ಯಮಗಳು ಕೂಡ ಮುಖ್ಯವಾಗಿ ಕನ್ನಡ ನಾಡಿನ ಟಿವಿ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದೆ.

ಚಾನೆಲ್‌ಗಳಿಗೆ ಆಘಾತ!

15 ವರ್ಷಗಳ ಹಿಂದೆ ಕನ್ನಡದಲ್ಲಿ ನ್ಯೂಸ್ ಚಾನೆಲ್ ಗಳನ್ನು ಭೂತ ಕನ್ನಡಿ ಹಿಡಿದು ಟಿವಿ ಸ್ಕ್ರೀನ್ ನೋಡಿ ಹುಡಕಾಡಬೇಕಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಕನ್ನಡದಲ್ಲಿ ನೂರಾರು ನ್ಯೂಸ್ ಚಾನೆಲ್ ಇವೆ. ಹೀಗಿದ್ದರೂ ಬಹುತೇಕ ಕನ್ನಡದ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರೋಧಿ ಸುದ್ದಿ ಪ್ರಕಟ ಮಾಡುತ್ತಿವೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಹೀಗಾಗಿ, ಹೊಸ ಪ್ಲಾನ್ ಮಾಡಿದೆ ಕರ್ನಾಟಕ ಕಾಂಗ್ರೆಸ್. ಕರ್ನಾಟಕ ಕಾಂಗ್ರೆಸ್ ಈಗ ಮಾಡಿಕೊಂಡ ಪ್ಲಾನ್ ಪ್ರಕಾರ, ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ನ್ಯೂಸ್ ಚಾನೆಲ್ ಕನ್ನಡದಲ್ಲಿ ಆರಂಭ ಮಾಡಲು ಚಿಂತನೆ ನಡೆದಿದೆ. ಹಾಗೇ, ಇಂಗ್ಲಿಷ್ ಭಾಷೆಯಲ್ಲೂ ಚಾನೆಲ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಕಡೆ ನ್ಯೂಸ್ ಪೇಪರ್ ಒಂದನ್ನು ಕರ್ನಾಟಕ ಕಾಂಗ್ರೆಸ್ ವತಿಯಿಂದ ಆರಂಭ ಮಾಡೋದಕ್ಕೆ ಚರ್ಚೆಗಳು ನಡೆದಿವೆಯಂತೆ. ಹೀಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಂತ ನ್ಯೂಸ್ ಚಾನೆಲ್ ಅಥವಾ ಮಾಧ್ಯಮ ಸಂಸ್ಥೆ ಆರಂಭ ಮಾಡುವ ಬಗ್ಗೆ ನಡೆದಿರುವ ಚಿಂತನೆ ಕುರಿತು ಇದೀಗ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮಾಹಿತಿ ನಿಡಿದ್ದಾರೆ.

ಪ್ಲಾನ್ ಜಾರಿ ಆಗುತ್ತಾ?

ಕನ್ನಡ ನ್ಯೂಸ್ ಚಾನೆಲ್‌ಗಳು ತಮ್ಮ ವಿರುದ್ಧ ಬೇಕು ಅಂತಲೇ ಸುದ್ದಿಯನ್ನ ಮಾಡುತ್ತಿವೆ. ಇದರ ಹಿಂದೆ ಖುದ್ದು ಬಿಜೆಪಿ ನಾಯಕರ & ಜೆಡಿಎಸ್ ನಾಯಕರ ಕುತಂತ್ರವು ಅಡಗಿದೆ ಎಂಬ ಆರೋಪವು ಕರ್ನಾಟಕ ಕಾಂಗ್ರೆಸ್ ನಾಯಕರದ್ದು.

ಇದನ್ನೂ ಓದಿ: ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ಪರಿಸ್ಥಿತಿ ಹೀಗಿದ್ದಾಗಲೇ ಸ್ವಂತ ಮಾಧ್ಯಮ ಸಂಸ್ಥೆ ಆರಂಭ ಮಾಡಿ ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟುವ ಐಡಿಯಾ ಕರ್ನಾಟಕ ಕಾಂಗ್ರೆಸ್ ನಾಯಕರದ್ದಾಗಿದೆ. ಆದರೆ, ಈ ಪ್ಲಾನ್ ಯಾವಾಗ ಜಾರಿ ಆಗುತ್ತೆ? ಅಥವಾ ಜಾರಿ ಆಗುವ ಮೊದಲೇ ಐಡಿಯಾ ಮುಗಿದು ಹೋಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

Latest News

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ:              ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಆಲಮಟ್ಟಿ : ಇಲ್ಲಿಗೆ ಸಮೀಪದ ಯಲಗೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ,

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ:                                                                           ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ವಿಜಯಪುರ : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರ ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ ವಿನಂತಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮ್ಮೇಳನದಲ್ಲಿ ಎಲ್ಲ ಜಾತಿ ಜನಾಂಗದವರು ಪಾಲ್ಗೊಳ್ಳಲಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.ಹಿಂದೂ ಸಮ್ಮೇಳನದ ಅಂಗವಾಗಿ ವಿವಿಧ ಕಡೆಗಳಲ್ಲಿ ಸ್ವತಃ ತಿರುಗಾಡಿ ಸಮ್ಮೇಳನದ ಕರಪತ್ರಗಳನ್ನು ವಿತರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.        ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.         ಮಠದ ಆಡಳಿತಾಧಿಕಾರಿ ವೇ.ಮರುಗೇಶ ವಿರಕ್ತಮಠ ಮಾತನಾಡಿ, ಹಣವುಳ್ಳವರು ಸಮಾಜದಲ್ಲಿ