One police constable is enough to arrest Kumaraswamy.. CM hits back at HDK

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

ಬೆಂಗಳೂರು: ಬಹುತೇಕ ನ್ಯೂಸ್ ಚಾನೆಲ್‌ಗಳು (News chanel) ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದ್ದು, ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ಪೆಟ್ಟುಕೊಡಲು ಸಿದ್ಧತೆ ನಡೆಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಟಿವಿ ಚಾನೆಲ್‌ಗಳ ವಿರುದ್ಧ ಕಾಂಗ್ರೆಸ್ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದೆಯಂತೆ. ಅಂದಹಾಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರೈಸಿದ್ದು, ಇದೀಗ 2ನೇ ವರ್ಷ ಪೂರೈಸುವತ್ತ ಮುನ್ನಡೆದಿದೆ. ಹೀಗಿದ್ದಾಗಲೇ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ & ಜೆಡಿಎಸ್ ನಾಯಕರು ಸಾಲು ಸಾಲು ಗಂಭೀರ ಆರೋಪಗಳನ್ನ ಮಾಡುತ್ತಿದ್ದಾರೆ.

ಅದರಲ್ಲೂ ‘ಮುಡಾ’ ಸೈಟ್ ಹಗರಣ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ಪ್ರಮುಖರ ವಿರುದ್ಧವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ಸಂಘಟಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಮಾಧ್ಯಮಗಳು ಕೂಡ ಮುಖ್ಯವಾಗಿ ಕನ್ನಡ ನಾಡಿನ ಟಿವಿ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದೆ.

ಚಾನೆಲ್‌ಗಳಿಗೆ ಆಘಾತ!

15 ವರ್ಷಗಳ ಹಿಂದೆ ಕನ್ನಡದಲ್ಲಿ ನ್ಯೂಸ್ ಚಾನೆಲ್ ಗಳನ್ನು ಭೂತ ಕನ್ನಡಿ ಹಿಡಿದು ಟಿವಿ ಸ್ಕ್ರೀನ್ ನೋಡಿ ಹುಡಕಾಡಬೇಕಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಕನ್ನಡದಲ್ಲಿ ನೂರಾರು ನ್ಯೂಸ್ ಚಾನೆಲ್ ಇವೆ. ಹೀಗಿದ್ದರೂ ಬಹುತೇಕ ಕನ್ನಡದ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರೋಧಿ ಸುದ್ದಿ ಪ್ರಕಟ ಮಾಡುತ್ತಿವೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಹೀಗಾಗಿ, ಹೊಸ ಪ್ಲಾನ್ ಮಾಡಿದೆ ಕರ್ನಾಟಕ ಕಾಂಗ್ರೆಸ್. ಕರ್ನಾಟಕ ಕಾಂಗ್ರೆಸ್ ಈಗ ಮಾಡಿಕೊಂಡ ಪ್ಲಾನ್ ಪ್ರಕಾರ, ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ನ್ಯೂಸ್ ಚಾನೆಲ್ ಕನ್ನಡದಲ್ಲಿ ಆರಂಭ ಮಾಡಲು ಚಿಂತನೆ ನಡೆದಿದೆ. ಹಾಗೇ, ಇಂಗ್ಲಿಷ್ ಭಾಷೆಯಲ್ಲೂ ಚಾನೆಲ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಕಡೆ ನ್ಯೂಸ್ ಪೇಪರ್ ಒಂದನ್ನು ಕರ್ನಾಟಕ ಕಾಂಗ್ರೆಸ್ ವತಿಯಿಂದ ಆರಂಭ ಮಾಡೋದಕ್ಕೆ ಚರ್ಚೆಗಳು ನಡೆದಿವೆಯಂತೆ. ಹೀಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಂತ ನ್ಯೂಸ್ ಚಾನೆಲ್ ಅಥವಾ ಮಾಧ್ಯಮ ಸಂಸ್ಥೆ ಆರಂಭ ಮಾಡುವ ಬಗ್ಗೆ ನಡೆದಿರುವ ಚಿಂತನೆ ಕುರಿತು ಇದೀಗ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮಾಹಿತಿ ನಿಡಿದ್ದಾರೆ.

ಪ್ಲಾನ್ ಜಾರಿ ಆಗುತ್ತಾ?

ಕನ್ನಡ ನ್ಯೂಸ್ ಚಾನೆಲ್‌ಗಳು ತಮ್ಮ ವಿರುದ್ಧ ಬೇಕು ಅಂತಲೇ ಸುದ್ದಿಯನ್ನ ಮಾಡುತ್ತಿವೆ. ಇದರ ಹಿಂದೆ ಖುದ್ದು ಬಿಜೆಪಿ ನಾಯಕರ & ಜೆಡಿಎಸ್ ನಾಯಕರ ಕುತಂತ್ರವು ಅಡಗಿದೆ ಎಂಬ ಆರೋಪವು ಕರ್ನಾಟಕ ಕಾಂಗ್ರೆಸ್ ನಾಯಕರದ್ದು.

ಇದನ್ನೂ ಓದಿ: ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ಪರಿಸ್ಥಿತಿ ಹೀಗಿದ್ದಾಗಲೇ ಸ್ವಂತ ಮಾಧ್ಯಮ ಸಂಸ್ಥೆ ಆರಂಭ ಮಾಡಿ ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟುವ ಐಡಿಯಾ ಕರ್ನಾಟಕ ಕಾಂಗ್ರೆಸ್ ನಾಯಕರದ್ದಾಗಿದೆ. ಆದರೆ, ಈ ಪ್ಲಾನ್ ಯಾವಾಗ ಜಾರಿ ಆಗುತ್ತೆ? ಅಥವಾ ಜಾರಿ ಆಗುವ ಮೊದಲೇ ಐಡಿಯಾ ಮುಗಿದು ಹೋಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ