Muda case DCM DK Shivakumar press meet in Bengaluru

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ಬಿಟ್ಟಿ ಯೋಜನೆ ಎಂದವರೇ ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಬಿಜೆಪಿಗರ ಕುಟುಕಿದ ಡಿಕೆ ಶಿವಕುಮಾರ್

ರಾಮನಗರ: ಕೇಂದ್ರ ಸಚಿವ ಅಮಿತ್ ಶಾ ಅವರು ಕಾಶ್ಮೀರದಲ್ಲಿ ನಮ್ಮ ಯೋಜನೆಯನ್ನೇ ಘೋಷಿಸುವ ಮೂಲಕ, ನಮ್ಮ ಸರ್ಕಾರದ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಕನಕಪುರದ ಹಾರೋಬೆಲೆಯಲ್ಲಿ ಆರ್ಕಾವತಿ ಜಲಾಶಯ ಬಲದಂಡೆ ಏತನೀರಾವರಿ ಯೋಜನೆಯ ಪುನಶ್ವೇತನ ಕಾಮಗಾರಿಯ ಪರೀಕ್ಷಾರ್ಥ ಚಾಲನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಕರಣೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕುಟುಕಿದರು.

ನಮ್ಮ ಸರ್ಕಾರದಲ್ಲಿ ಈಗ ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಅದನ್ನೇ ನೋಡಿಕೊಂಡು ಅಮಿತ್ ಶಾ ಅವರು ಕಾಶ್ಮೀರದಲ್ಲಿ ಮಹಿಳೆಯರಿಗೆ 1.5 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ನಾವು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆಂದು ಹೇಳಿದಾಗ ಬಿಟ್ಟಿ ಯೋಜನೆ, ರಾಜ್ಯ ದಿವಾಳಿ ಆಗುತ್ತದೆಂದು ಬಿಜೆಪಿಯವರು ಬೊಬ್ಬಿರಿದಿದ್ದರು. ಈಗ ನೋಡಿದರೆ ಕಾಶ್ಮೀರದಲ್ಲಿ ಅಮಿತ್ ಶಾ ಅವರೇ 1500 ರೂಪಾಯಿ ಕೊಡುವುದಾಗಿ ಬೋರ್ಡ್ ಹಿಡಿಯುತ್ತಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ನಮ್ಮ ಅಭಿವೃದ್ಧಿ ಎಲ್ಲರಿಗೂ ಮಾದರಿ ಎಂದು ಬಿಜೆಪಿಗೆ ಕುಟುಕಿದರು.

ಇದೇವೇಳೆ ಎತ್ತಿನಹೊಳೆ ಯೋಜನೆ ಯಶಸ್ವಿ ಅನುಷ್ಠಾನ ವಿಚಾರವಾಗಿ ಮಾತನಾಡಿದ ಅವರು, ಇದು ಸಾಧ್ಯವೇ ಎಂದು ನಮ್ಮ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಅವರಿಗೆಲ್ಲಾ ಉತ್ತರವೆಂಬಂತೆ ನಾವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದೇವೆ.

ಇದನ್ನೂ ಓದಿ: Vijayapur: ರಥದ ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ಇನ್ನು ಅಲಮಟ್ಟಿ ಅಣೆಕಟ್ಟಿನ ಕ್ರಸ್ಟ್ ಗೇಟ್ ಮುರಿದು ಹೋದಾಗ ನನ್ನ ಬಗ್ಗೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಒಂದೇ ವಾರದಲ್ಲಿ ಅದನ್ನು ಸರಿ ಮಾಡಿಸಿದ್ದೇವೆ. ಇನ್ನು ಮೇಕೆದಾಟು ಸಹ ಆಗಬೇಕಿದೆ. ಈ ವಿಚಾರವಾಗಿ ನಾವು ಗಮನಹರಿಸುತ್ತೇವೆ ಎಂದು ಭರವಸೆ ನೀಡಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು