Congress leaders were confused about the figures in the press conference

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

ಮುದ್ದೇಬಿಹಾಳ : ಮತಕ್ಷೇತ್ರದ ಶಾಂತಿಯುತ ವಾತಾವರಣವನ್ನು ಕದಡುವ ಕಾರ್ಯಕ್ಕೆ ಮುಂದಾಗುವುದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಶೋಭೆ ತರುವುದಿಲ್ಲ ಎಂದು ಎಪಿಎಂಸಿ ಸದಸ್ಯ ವಾಯ್.ಎಚ್.ವಿಜಯಕರ್ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಾಡಗೌಡರು ಕಳೆದ ಮೂವ್ವತ್ತು ವರ್ಷಗಳಲ್ಲಿ ಸಚಿವರಾಗಿದ್ದಾರೆ, ದೆಹಲಿ ಪ್ರತಿನಿಧಿಗಳಾಗಿದ್ದಾರೆ,ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಅವರ ಬಗ್ಗೆ ಮಾಜಿ ಶಾಸಕರು ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಹಿಂದೆ ಹುಡ್ಕೋದಲ್ಲಿ ನಿವೇಶನ ಖರೀದಿಯಾಗದ ಸಮಯದಲ್ಲಿ ಹೆಚ್ಚು ಸೈಟ್ ಕೊಂಡವರಿಗೆ ರಿಯಾಯಿತಿ ನೀಡುವುದಾಗಿ ತಿಳಿಸಿದ್ದರು.ಅದರಂತೆ ನಾಡಗೌಡರು ಹೆಚ್ಚಿಗೆ ಸೈಟ್ ಖರೀದಿಸಿದ್ದಾರೆ. ಅದರಲ್ಲಿ ತಪ್ಪು ಹುಡುಕುವಂತದ್ದೇನಿದೆ ಎಂದ ವಿಜಯಕರ್, ಮಾಜಿ ಶಾಸಕ ನಡಹಳ್ಳಿಯವರು ಪರ್ಸೆಂಟೇಜ್ ಪಡೆದು ನಿರ್ಮಿಸಿದ ಸಿಸಿ ರಸ್ತೆಗಳೆಲ್ಲ ಬಿರುಕು ಬಿಟ್ಟಿವೆ.ಅಭಿವೃದ್ಧಿ ಎಂದರೆ ಕೇವಲ ಸಿಸಿ ರಸ್ತೆ ಅಲ್ಲ.ಹಿಂದಿನ ಸಿಪಿಐ ಯಾರ ಮನೆಯ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಮತಕ್ಷೇತ್ರದಲ್ಲಿ ಒಂದೂವರೆ ವರ್ಷದ ಅವಧಿಯಲ್ಲಿ ಶಾಸಕ ನಾಡಗೌಡರು, ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ., ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ ಒಂದು ಕೋಟಿ,,ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ, ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ, ಮುದ್ದೇಬಿಹಾಳ, ತಾಳಿಕೋಟಿ,ನಾಲತವಾಡದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ, ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂ., ರೂ.ಬಿಡುಗಡೆ ಆಗಿದೆ.

ಈ ಎಲ್ಲ ಯೋಜನೆಗಳು ನಾಡಗೌಡರ ಅವಧಿಯಲ್ಲಿ ಚಾಲ್ತಿಯಲ್ಲಿರುವಂತಹದ್ದಾಗಿವೆ. ಮಾಜಿ ಶಾಸಕ ನಡಹಳ್ಳಿಯವರು ಆರೋಪ ಮಾಡುವ ಮುನ್ನ ಯೋಚಿಸಿ ಮಾತನಾಡುವುದನ್ನು ಕಲಿತುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಕಾಮರಾಜ ಬಿರಾದಾರ ಮಾತನಾಡಿದರು.ಮುಖಂಡರಾದ ಸುರೇಶಗೌಡ ಪಾಟೀಲ್ ಇಂಗಳಗೇರಿ, ಅಬ್ದುಲಗಫೂರ ಮಕಾನದಾರ, ಬಾಪುಗೌಡ ಪೀರಾಪೂರ, ಗುತ್ತಿಗೆದಾರ ಯಲ್ಲಪ್ಪ ಚಲವಾದಿ, ಪ್ರಭುರಾಜ ಕಲ್ಬುರ್ಗಿ, ಸಂಗಣ್ಣ ನಾಲತವಾಡ, ತಿಪ್ಪಣ್ಣ ಗೋನಾಳ, ಶ್ರೀಕಾಂತ ಚಲವಾದಿ, ರಾಜು ರಾಯಗೊಂಡ ಮತ್ತಿತರರು ಇದ್ದರು.

ಅನುದಾನ ಬಿಡುಗಡೆಯ ನಿಖರ ಅಂಕಿ ಸಂಖ್ಯೆ ; ಮುಖಂಡರ ಅಸ್ಪಷ್ಟತೆ

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಅವರು, ಮುದ್ದೇಬಿಹಾಳ ಮತಕ್ಷೇತ್ರಕ್ಕೆ 350 ಕೋಟಿ ರೂ. ಅನುದಾನ ಶಾಸಕ ನಾಡಗೌಡರು ಶಾಸಕರಾದ ಒಂದೂವರೆ ವರ್ಷದ ಅವಧಿಯಲ್ಲಿ ಬಿಡುಗಡೆಯಾಗಿದೆ ಎಂದು ಹೇಳಿದರೆ, ಇನ್ನೋರ್ವ ಮುಖಂಡ ವಾಯ್.ಎಚ್.ವಿಜಯಕರ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ನಾಡಗೌಡರು 250 ಕೋಟಿಗೂ ಅಧಿಕ ಅನುದಾನ ತಂದಿದ್ದಾರೆ ಎಂದು ಹೇಳುವ ಮೂಲಕ ವಿರೋಧ ಪಕ್ಷದವರ ಆರೋಪಕ್ಕೆ ಸ್ಪಷ್ಟವಾದ ಉತ್ತರವನ್ನು ದಾಖಲೆ ಸಮೇತವಾಗಿ ಮಾಧ್ಯಮದವರಿಗೆ ಒದಗಿಸುವುದಕ್ಕೆ ಆಗಲಿಲ್ಲ.

ಇದನ್ನೂ ಓದಿ: ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು