Congress leaders were confused about the figures in the press conference

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

ಮುದ್ದೇಬಿಹಾಳ : ಮತಕ್ಷೇತ್ರದ ಶಾಂತಿಯುತ ವಾತಾವರಣವನ್ನು ಕದಡುವ ಕಾರ್ಯಕ್ಕೆ ಮುಂದಾಗುವುದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಶೋಭೆ ತರುವುದಿಲ್ಲ ಎಂದು ಎಪಿಎಂಸಿ ಸದಸ್ಯ ವಾಯ್.ಎಚ್.ವಿಜಯಕರ್ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಾಡಗೌಡರು ಕಳೆದ ಮೂವ್ವತ್ತು ವರ್ಷಗಳಲ್ಲಿ ಸಚಿವರಾಗಿದ್ದಾರೆ, ದೆಹಲಿ ಪ್ರತಿನಿಧಿಗಳಾಗಿದ್ದಾರೆ,ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಅವರ ಬಗ್ಗೆ ಮಾಜಿ ಶಾಸಕರು ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಹಿಂದೆ ಹುಡ್ಕೋದಲ್ಲಿ ನಿವೇಶನ ಖರೀದಿಯಾಗದ ಸಮಯದಲ್ಲಿ ಹೆಚ್ಚು ಸೈಟ್ ಕೊಂಡವರಿಗೆ ರಿಯಾಯಿತಿ ನೀಡುವುದಾಗಿ ತಿಳಿಸಿದ್ದರು.ಅದರಂತೆ ನಾಡಗೌಡರು ಹೆಚ್ಚಿಗೆ ಸೈಟ್ ಖರೀದಿಸಿದ್ದಾರೆ. ಅದರಲ್ಲಿ ತಪ್ಪು ಹುಡುಕುವಂತದ್ದೇನಿದೆ ಎಂದ ವಿಜಯಕರ್, ಮಾಜಿ ಶಾಸಕ ನಡಹಳ್ಳಿಯವರು ಪರ್ಸೆಂಟೇಜ್ ಪಡೆದು ನಿರ್ಮಿಸಿದ ಸಿಸಿ ರಸ್ತೆಗಳೆಲ್ಲ ಬಿರುಕು ಬಿಟ್ಟಿವೆ.ಅಭಿವೃದ್ಧಿ ಎಂದರೆ ಕೇವಲ ಸಿಸಿ ರಸ್ತೆ ಅಲ್ಲ.ಹಿಂದಿನ ಸಿಪಿಐ ಯಾರ ಮನೆಯ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಮತಕ್ಷೇತ್ರದಲ್ಲಿ ಒಂದೂವರೆ ವರ್ಷದ ಅವಧಿಯಲ್ಲಿ ಶಾಸಕ ನಾಡಗೌಡರು, ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ., ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ ಒಂದು ಕೋಟಿ,,ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ, ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ, ಮುದ್ದೇಬಿಹಾಳ, ತಾಳಿಕೋಟಿ,ನಾಲತವಾಡದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ, ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂ., ರೂ.ಬಿಡುಗಡೆ ಆಗಿದೆ.

ಈ ಎಲ್ಲ ಯೋಜನೆಗಳು ನಾಡಗೌಡರ ಅವಧಿಯಲ್ಲಿ ಚಾಲ್ತಿಯಲ್ಲಿರುವಂತಹದ್ದಾಗಿವೆ. ಮಾಜಿ ಶಾಸಕ ನಡಹಳ್ಳಿಯವರು ಆರೋಪ ಮಾಡುವ ಮುನ್ನ ಯೋಚಿಸಿ ಮಾತನಾಡುವುದನ್ನು ಕಲಿತುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಕಾಮರಾಜ ಬಿರಾದಾರ ಮಾತನಾಡಿದರು.ಮುಖಂಡರಾದ ಸುರೇಶಗೌಡ ಪಾಟೀಲ್ ಇಂಗಳಗೇರಿ, ಅಬ್ದುಲಗಫೂರ ಮಕಾನದಾರ, ಬಾಪುಗೌಡ ಪೀರಾಪೂರ, ಗುತ್ತಿಗೆದಾರ ಯಲ್ಲಪ್ಪ ಚಲವಾದಿ, ಪ್ರಭುರಾಜ ಕಲ್ಬುರ್ಗಿ, ಸಂಗಣ್ಣ ನಾಲತವಾಡ, ತಿಪ್ಪಣ್ಣ ಗೋನಾಳ, ಶ್ರೀಕಾಂತ ಚಲವಾದಿ, ರಾಜು ರಾಯಗೊಂಡ ಮತ್ತಿತರರು ಇದ್ದರು.

ಅನುದಾನ ಬಿಡುಗಡೆಯ ನಿಖರ ಅಂಕಿ ಸಂಖ್ಯೆ ; ಮುಖಂಡರ ಅಸ್ಪಷ್ಟತೆ

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಅವರು, ಮುದ್ದೇಬಿಹಾಳ ಮತಕ್ಷೇತ್ರಕ್ಕೆ 350 ಕೋಟಿ ರೂ. ಅನುದಾನ ಶಾಸಕ ನಾಡಗೌಡರು ಶಾಸಕರಾದ ಒಂದೂವರೆ ವರ್ಷದ ಅವಧಿಯಲ್ಲಿ ಬಿಡುಗಡೆಯಾಗಿದೆ ಎಂದು ಹೇಳಿದರೆ, ಇನ್ನೋರ್ವ ಮುಖಂಡ ವಾಯ್.ಎಚ್.ವಿಜಯಕರ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ನಾಡಗೌಡರು 250 ಕೋಟಿಗೂ ಅಧಿಕ ಅನುದಾನ ತಂದಿದ್ದಾರೆ ಎಂದು ಹೇಳುವ ಮೂಲಕ ವಿರೋಧ ಪಕ್ಷದವರ ಆರೋಪಕ್ಕೆ ಸ್ಪಷ್ಟವಾದ ಉತ್ತರವನ್ನು ದಾಖಲೆ ಸಮೇತವಾಗಿ ಮಾಧ್ಯಮದವರಿಗೆ ಒದಗಿಸುವುದಕ್ಕೆ ಆಗಲಿಲ್ಲ.

ಇದನ್ನೂ ಓದಿ: ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ