Congress is responsible for Mahadayi's setback: MP Basavaraja Bommai

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು.

ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.


11 ವಿಧೇಯಕಗಳನ್ನು ವಾಪಾಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ದ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ತಿರುಮಲದಲ್ಲಿ ಭಕ್ತರಿಗೆ ತಿಲಕ ಧಾರಣೆ ಆರಂಭ

ಇನ್ನು, ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600