Congress is responsible for Mahadayi's setback: MP Basavaraja Bommai

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು.

ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.


11 ವಿಧೇಯಕಗಳನ್ನು ವಾಪಾಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ದ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ತಿರುಮಲದಲ್ಲಿ ಭಕ್ತರಿಗೆ ತಿಲಕ ಧಾರಣೆ ಆರಂಭ

ಇನ್ನು, ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು