Congress is responsible for Mahadayi's setback: MP Basavaraja Bommai

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು.

ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.


11 ವಿಧೇಯಕಗಳನ್ನು ವಾಪಾಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ದ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ತಿರುಮಲದಲ್ಲಿ ಭಕ್ತರಿಗೆ ತಿಲಕ ಧಾರಣೆ ಆರಂಭ

ಇನ್ನು, ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ