This is the advertisement in the next CM newspaper

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದಿದ್ದರೂ ಈ ಹುದ್ದೆಗೆ ಟವೆಲ್ ಹಾಕುವ ರೇಸ್‌ನಲ್ಲಿ ಗುರುತಿಸಿಕೊಳ್ಳಲು ಹಲವು ನಾಯಕರು ಮುಂದಾಗಿದ್ದು, ರಾಜಕೀಯ ಕೋಲಾಹಲಕ್ಕೆ ಮುನ್ನುಡು ಬರೆದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಮೂಲಕ ಖಾಲಿ ಇಲ್ಲದ ಮುಖ್ಯಮಂತ್ರಿ ಹುದ್ದೆಗೆ ಹಲವು ನಾಯಕರಲ್ಲಿ ಆಸೆ ಗರಿಗೆದರಿರುವುದು ಸ್ಪಷ್ಟವಾಗಿದೆ.

ಸಿಎಂ ಬದಲಾವಣೆ ಇಲ್ಲ ಎಂಬುದು ಗೊತ್ತಿದ್ದರೂ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡುತ್ತಿರುವ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಡುವುದು ಮಾತ್ರವಲ್ಲದೇ, ಪರಸ್ಪರ ಪರೋಕ್ಷ ವಾಕ್ಸಮರ ಶುರುವಾಗಿರುವುದು ಪಕದ ಹೈಕಮಾಂಡ್‌ಗೆ ಇರುಸುಮುರುಸು ಉಂಟಾಗಿದೆ. ಎಂ.ಬಿ.ಪಾಟೀಲ್ ಅದರಲ್ಲಿಯೂ ಹಾಗೂ ಶಿವಾನಂದ ಪಾಟೀಲ್ ಅವರ ನಡುವೆ ನೇರಾನೇರ ವಾಕಮರ ಇದೀಗ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಮುಡಾ ನಿವೇಶನ ಹಂಚಿಕೆ ವಿಷಯದಲ್ಲಿ ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿದ್ದರೂ ಯಾವುದೇ ಕಾರಣಕ್ಕೂ ರಾಜೀನಾಮೆ ತೆಗೆದುಕೊಳ್ಳುವ ಪ್ರಶ್ನೆಯಿಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಆದರೂ ಪಕ್ಷದ ಕೆಲ ನಾಯಕರು ತಾವೂ ಆಕಾಂಕ್ಷಿ ಎನ್ನುವ ಮಾತುಗಳನ್ನು ಹೇಳುತ್ತಿದ್ದಾರೆ.

ಈ ಹೇಳಿಕೆಗಳು ಪಕದ ಆಂತರಿಕ ಪಕ್ಷದ ವಲಯದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಪ್ರತಿಪಕ್ಷಗಳಿಗೆ ಪರೋಕ್ಷ ಸಹಾಯ ಮಾಡುತ್ತಿದೆ ಎಂದು ಪಕ್ಷದ ನಾಯಕರೇ ಹೇಳುತ್ತಿದ್ದಾರೆ.

ಭವಿಷ್ಯದ ಆಲೋಚನೆ:

ಮುಖ್ಯಮಂತ್ರಿ ಆಕಾಂಕ್ಷಿ ಎನ್ನುವ ಹೇಳಿಕೆ ನೀಡುತ್ತಿರುವ ಬಹುತೇಕ ನಾಯಕರು ಸಿದ್ದರಾಮಯ್ಯ ಅವರ ಬದಲಿಗೆ ತಮಗೆ ಸಿಎಂ ಹುದ್ದೆ ನೀಡಿ ಎನ್ನುವ ಮನಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿಲ್ಲ. ಬದಲಿಗೆ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ರೀತಿಯ ಹೇಳಿಕೆ ನೀಡುವ ಮೂಲಕ ‘ಸಿಎಂ ಗಾದಿ’ಗೆ ಟವೆಲ್ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

ಇನ್ನು ಕೆಲವರಿಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿದ್ದರೂ ಈ ಕ್ಷಣದಲ್ಲಿ ಆ ಆಸೆ ಹೊರ ಹಾಕಿದರೆ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎನ್ನುವ ಆತಂಕ ದಿಂದ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ