Kalburgi: Honeytrap racket, arrest of accused

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ಕಲಬುರಗಿ: ಅಮಾಯಕ ಯುವತಿಯರನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಪರಿಚಯಿಸಿಕೊಂಡು ಕಲಬುರಗಿಯಲ್ಲಿನ ಸರಕಾರಿ ಅಧಿಕಾರಿಗಳ, ಉದ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುವ ದಂಧೆ ಎಗ್ಗಿಲ್ಲದೆ ಸಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

10ಕ್ಕೂ ಅಧಿಕ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರಾಪ್ ದಂಧೆ ಮಾಡುತ್ತಿರುವ ಗ್ಯಾಂಗ್‌ನ ರಾಜು ಲೇಂಗಟಿ ಸೇರಿದಂತೆ 4 ಜನರ ವಿರುದ್ಧ ಇದೀಗ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನುಳಿದ, ಗ್ಯಾಂಗ್ ನ ಸದಸ್ಯರ ಹುಡುಕಾಟಕ್ಕಾಗಿ ಪೊಲೀಸರು ತಮ್ಮ ಜಾಲವನ್ನು ಬಿಸಾಡಿದ್ದಾರೆ.

ದಲಿತ ಸೇನೆಯ ಮುಖಂಡನ ಬಂಧನ:

ಯುವತಿಯರನ್ನು ಬಳಸಿಕೊಂಡು ಸರಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಆರೋಪದ ಹಿನ್ನಲೆಯಲ್ಲಿ ದಲಿತ ಸೇನೆಯ ಮುಖಂಡ ರಾಜು ಲೇಂಗಟಿ ಅವರನ್ನು ಇದೀಗ ಪೊಲೀ ಸರು ಬಂಧನ ಮಾಡಿದ್ದಾರೆ.

ಆಡಿಯೊ ಬಿಡುಗಡೆ:

ಕಲಬುರಿಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜು ಬೇಂಗಟಿ ಹಾಗೂ ಸಂತ್ರಸ್ತ ಯುವತಿಯ ನಡುವಿನ ಮಾತುಕತೆಯ ಅಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉದ್ಯಮಿಯೊಬ್ಬರ ಬಳಿ ಪಡೆದಿರುವ ಹಣದ ಕುರಿತಾಗಿ ಆರೋಪಿ ರಾಜು ಲೇಂಗಟಿ ಆಡಿಯೋದಲ್ಲಿ ಮಾತನಾಡಿದ್ದು, ಇದೀಗ ಬಹಿರಂಗವಾಗಿದೆ. 40 ಲಕ್ಷ ಡೀಲ್ ನಲ್ಲಿ ಹಣದ ಬಗ್ಗೆ ಗೊಂದಲವನ್ನು ಸೃಷ್ಟಿ ಮಾಡಿಕೊಂಡಿರುವ ಹನಿಟ್ರಾಪ್ ಗ್ಯಾಂಗ್, ಆಡಿಯೊದಲ್ಲಿ ಎಲ್ಲವೂ ಮಾತನಾಡಿರುವುದು ಬೆಳಕಿಗೆ ಬಂದಿದೆ.

ಯುವತಿಯ ಜೊತೆಗೆ ಮಾತನಾಡುವಾಗಲೇ ಉದ್ಯಮಿಗೆ ಕರೆ ಮಾಡಿ ಡೀಲ್ ಹಣದ ಸ್ಪಷ್ಟತೆಯನ್ನು ಆರೋಪಿ ರಾಜು ಲೇಂಗಟಿ ನೀಡಿದ್ದಾನೆ. 40 ಲಕ್ಷ ಹಣ ಡೀಲ ಆಗಿದೆ. ಹತ್ತು ಲಕ ಹಣ ಈಗಾಗಲೇ ಕೊಟ್ಟಿದ್ದು, ಉಳಿದ ಹಣವನ್ನು ಆಮೇಲೆ ನೀಡುವುದಾಗಿ ಹೇಳಿದ್ದಾರೆ. ಎಲ್ಲರಿಗೂ ಎರಡು ಎರಡು ಲಕ್ಷ ಹಂಚಿಕೊಳ್ಳುವುದಾಗಿ ಅಂತ ಆಡಿಯೋದಲ್ಲಿ ರಾಜು ಮಾತನಾಡಿದ್ದು, ಪ್ರಭು ಹಿರೇಮಠ ನಿಮಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾನೆ ಎಂದು ಆಡಿಯೋ ಮಾಡಿ ಇದೀಗ ವಿವರಣೆ ನೀಡಿದೆ.

ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ:

ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ಕರಾಳ ದಂಧೆಯ ಮುಖವಾಡ ಬಗೆದಷ್ಟೂ ಬಯಲಾಗುತ್ತಿದೆ. ಹನಿಟ್ರಾಪ್ ಪ್ರಕರಣದ ಆರೋಪಿ ಪ್ರಭು ಸ್ವಾಮಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾನೆ. ವಿಡಿಯೊ ಬಿಡುಗಡೆ ಮಾಡಿ, ಉದ್ಯಮಿಯಿಂದ ರಾಜು ಬೇಂಗತಿ ಅವರು 6 ಲಕ್ಷ ಹಣವನ್ನು ಪಡೆದು ನನ್ನ ಖಾತೆಗೆ ಆರ್ ಟಿ ಜಿ ಎಸ್ ಮೂಲಕ ಹಾಕಿದ್ದರು.

ಇದನ್ನೂ ಓದಿ: Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

ಅದಾದ ಬಳಿಕ ನಮ್ಮ ಮಾವನ ಖಾತೆಗೆ 8 ಲಕ್ಷ ಹಣವನ್ನು ಪುನಃ ನೆಫ್ಟ್, ಆರ್‌ಟಿಜಿಎಸ್ ಮೂಲಕ ಹಾಕಿದ್ದಾರೆ. ಹೀಗೆ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿದ ಹಣವನ್ನು ರಾಜು ಲೇಂಗಟಿ ಅವರು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಯಾರಿಗೋ ಕೊಡಬೇಕು ಅಂತ ಹೇಳಿ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿಸಿದ್ದು, ಹಣ ಹಾಕಿದ ಬಳಿಕ ಅವರೇ ವಿತ್ ಡ್ರಾ ಮಾಡಿಕೊಂಡಿದ್ದಾರೆ.ರಾಜು ಲೇಂಗಟಿ ಅವರನ್ನು ಕೇಳಿದಾಗ ಸಂಘಟನೆಯವರಿಗೆ ಕೊಡಬೇಕು ಎಂದು ಹೇಳಿದ್ದರು. ಸಾಲದಂತೆ ಹಣದ ವಿಚಾರದಲ್ಲಿ ಗಲಾಟೆ ಮಾಡಿ ನನ್ನ ಮೇಲೆ ಕೇಸ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಪ್ರಕರಣದ ಆರೋಪಿ ಪ್ರಭುಸ್ವಾಮಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್