Karnataka cm race: 'Bande' foreign tour; Rahul Gandhi in America before DK!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಬೆಂಗಳೂರು: ಇದೇ ವರ್ಷ ನವೆಂಬರ್‌ 5ರಂದು ಅಮೆರಿಕ ಅಧ್ಯಕ್ಷರ ಆಯ್ಕೆಯ (Election of the President of the United States) ಐತಿಹಾಸಿಕ ಚುನಾವಣೆ ನಡೆಯಲಿದ್ದು, ಡೆಮಾಕ್ರೆಟಿಕ್‌ ಪಕ್ಷದಿಂದ ಭಾರತೀಯ ಮೂಲದ ಕಮಲಾ ಹ್ಯಾರೀಸ್‌‌ (Kamala Harris) ಅಭ್ಯರ್ಥಿಯಾಗಿದ್ದರೆ ರಿಪಬ್ಲಿಕನ್‌ ಪಕ್ಷದಿಂದ (Republican Party) ಡೊನಾಲ್ಡ್‌ ಟ್ರಂಪ್‌ 2ನೇ ಸಲ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈಗ ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌ (DK Shivakumar) ಅಮೆರಿಕಾಗೆ ತೆರಳಿದ್ದಾರೆ.

ಹ್ಯಾರಿಸ್‌ಗೂ ಡಿಸಿಎಂಗೂ ಹೇಗೆ ನಂಟು?

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ನಿಂತಿರುವ ಭಾರತ ಮೂಲದ ಕಮಲಾ ಹ್ಯಾರಿಸ್‌ಗೂ ಕರ್ನಾಟಕದ ಡಿ.ಕೆ.ಶಿವಕುಮಾರ್‌ಗೂ ಏನಪ್ಪಾ ಸಂಬಂಧ ಅಂತೀರಾ? ಹೌದು, ಇದು ಡಿ.ಕೆ.ಶಿವಕುಮಾರ್‌ ಆಪ್ತರು, ಕಾಂಗ್ರೆಸ್ಸಿಗರು, ಬಿಜೆಪಿ, ಜೆಡಿಎಸ್‌ನವರ ಜೊತೆ ಬಹುತೇಕ ಕನ್ನಡಿಗರನ್ನೂ ಕಾಡ್ತಿರೋ ಪ್ರಶ್ನೆಯಾಗಿದೆ. ಎಲ್ಲಿಯ ಕಮಲಾ ಹ್ಯಾರಿಸ್‌, ಎಲ್ಲಿಯ ಡಿಕೆಶಿ ಹ್ಯಾರಿಸ್‌ಗೂ ಏನು ನಂಟು ಅಂತಾ ಅದಕ್ಕೂ ಉತ್ತರ ಇದೆ ನೋಡಿ..

ಕಮಲಾ ಹ್ಯಾರಿಸ್‌-ಡಿಕೆಶಿ ಗೆಳೆತನ!

ಕಮಲಾ ತಾಯಿ ಶ್ಯಾಮಲಾ ಗೋಪಾಲನ್‌ ತಮಿಳುನಾಡಿನವರು. ಅಮೆರಿಕದಲ್ಲಿದ್ದರೂ ಭಾರತದಲ್ಲಿ ಟ್ರಸ್ಟ್ ಮೂಲಕ ಜನಸೇವೆ ಮಾಡ್ತಿದ್ದಾರೆ. ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ ಜೊತೆ ಡಿಕೆಶಿ ಅವರಿಗೆ ನಂಟಿದೆಯಂತೆ! ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ಗೆ ಡಿಕೆ ಶಿವಕುಮಾರ್‌ ಎಲ್ಲಾ ರೀತಿಯ ನೆರವನ್ನೂ ಕೊಟ್ಟಿದ್ದಾರೆ ಅಂತೆ. ಹಾಗಾಗಿನೇ ಕಮಲಾ ಹ್ಯಾರಿಸ್‌ ಜೊತೆ ಡಿಕೆಶಿ ರಾಜಕೀಯ ಒಡನಾಟ ಶುರುವಾಗುವ ಲಕ್ಷಣ ಕಾಣಿಸಿದ್ದು. ಅನಿವಾಸಿ ಕನ್ನಡಿಗರ ಮತ ಸೆಳೆಯಲು ಆಹ್ವಾನ ಕೊಟ್ಟಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್‌ 10ರಂದು ಅಮೆರಿಕದ ನಾರ್ತ್ ಕ್ಯಾರೊಲಿನಾದಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಅಮೆರಿಕದಲ್ಲಿರುವ ಭಾರತೀಯ ಮತದಾರರನ್ನು ಸೇರಿಸಲಾಗ್ತಿದ್ದು ಭಾರತೀಯ ಗಣ್ಯರನ್ನೂ ಆಹ್ವಾನಿಸಲಾಗಿದ್ದು ಡಿ.ಕೆ.ಶಿವಕುಮಾರ್‌ ಕೂಡ ಒಬ್ಬರು ಅನ್ನೋದು ಪ್ರಮುಖ ವಿಷ್ಯ.

ಅಂದಹಾಗೆ, ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ದೇಶ ಬಿಟ್ಟು ಹೋಗುವಂತಿಲ್ಲ. ಹೀಗಾಗಿ ಕೋರ್ಟ್‌ನಿಂದ ಅನುಮತಿಯನ್ನೂ ಪಡೆದು ಅಮೆರಿಕಗೆ ಹೋಗಿದ್ದಾರೆ. ಸೆಪ್ಟೆಂಬರ್‌ 14ಕ್ಕೆ ಡಿಕೆಶಿ ವಾಪಸ್ಸಾಗಲಿದ್ದಾರೆ. ಆದರೆ, ಇದು ಖಾಸಗಿ ಕಾರ್ಯಕ್ರಮ ಅಷ್ಟೇ ಅಂತ ಯಾವ ಗುಟ್ಟನ್ನೂ ಡಿ.ಕೆ.ಶಿವಕುಮಾರ್‌ ಬಿಟ್ಟುಕೊಟ್ಟಿಲ್ಲ.

ಡಿಕೆಶಿಗೂ ಮೊದಲೇ ಅಮೆರಿಕ ತಲುಪಿದ ರಾಹುಲ್‌‌:

ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಿನ ಚುನಾವಣೆಯಲ್ಲಿ ಬೆಂಬಲ ಘೋಷಿಸಿತ್ತು. ಅವತ್ತು ಮೋದಿಯವ್ರೇ ಅಮೆರಿಕಾಗೆ ತೆರಳಿ ಟ್ರಂಪ್‌ ಪರ ಮತಯಾಚಿಸಿದ್ರು. ಈಗ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಪರ ಕಾಂಗ್ರೆಸ್‌ ಪ್ರಚಾರ ಮಾಡ್ತಿದೆ. ರಾಹುಲ್ ಗಾಂಧಿಯವ್ರು ಕೂಡ 3 ದಿನಗಳ ಅಮೆರಿಕ ಪ್ರವಾಸ ನಡೆಸ್ತಿದ್ದು ಈಗಾಗ್ಲೇ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ ತಲುಪಿದದಾರೆ ಟೆಕ್ಸಾಸ್‌ ಏರ್‌ಪೋರ್ಟ್‌ನಲ್ಲಿ ರಾಹುಲ್ ಗಾಂಧಿಯವ್ರನ್ನ ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಸ್ವಾಗತಿಸಿದ್ದರು.

ರಾಹುಲ್‌ ಗಾಂಧಿ ವಾಷಿಂಗ್ಟನ್‌, ಡಲ್ಲಾಸ್‌ ನಗರಗಳಲ್ಲಿ, ಜಾರ್ಜ್‌ಟೌನ್‌ ಮತ್ತು ಟೆಕ್ಸಾಸ್‌ ವಿಶ್ವವಿದ್ಯಾಲಯಗಳಲ್ಲಿ ಸಂವಾದ ನಡೆಸ್ತಾರೆ. ಡಿ.ಕೆ.ಶಿವಕುಮಾರ್‌ ನಾರ್ತ್‌ ಕ್ಯಾರೊಲಿನಾದಲ್ಲಿ ಕಮಲಾ ಹ್ಯಾರಿಸ್‌ ಪರ ಪ್ರಚಾರ ಮಾಡ್ತಿದ್ದಾರೆ. ಏನೇ ಆಗ್ಲಿ ಅಮೆರಿಕಾ ಎಲೆಕ್ಷನ್‌ನಲ್ಲೂ ಭಾರತೀಯರ ಪಾತ್ರ ಅದ್ರಲ್ಲೂ ದಕ್ಷಿಣ ಭಾರತದವ್ರು, ನಮ್ಮ ಕನ್ನಡಿಗರ ಪಾತ್ರನೂ ಮುಖ್ಯವಾಗಿದೆ ಅನ್ನೋದಕ್ಕೆ ಡಿಕೆಶಿ ಅಮೆರಿಕ ಟೂರೇ ಸಾಕ್ಷಿ.

ಇದನ್ನೂ ಓದಿ: FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಇದೇ ವೇಳೆ ರಾಹುಲ್ ಗಾಂಧಿ ಮತ್ತು ಡಿಕೆಶಿ ರಹಸ್ಯೆ ಸಭೆಗೆ ವೇದಿಕೆ ಸಿದ್ಧವಾಗಿದೆಯಂತೆ. ಆ ಸಭೆಯಲ್ಲಿ, ಒಂದು ವೇಳೆ ಕರ್ನಾಟಕದ ಸಿಎಂ ಬದಲಾವಣೆ ಮಾಡುವ ಪ್ರಸಂಗ ಬಂದರೆ ಆಗ ಯಾರನ್ನು ಸಿಎಂ ಮಾಡಬೇಕು ಎಂದು ನಿರ್ಧಾರ ಮಾಡಲಾಗುತ್ತದೆ ಅಂತೆ. ಡಿಕೆಶಿ ತಮಗೆ ಸಿಎಂ ಹುದ್ದೆ ನೀಡುವಂತೆ ಲಾಭಿ ಮಾಡಲು ಇದು ಸಕಾಲ ಎಂಬುದು ರಾಜಕೀಯ ಪಂಡಿತರ ವಿಶ್ಲೇಷಣೆಯಾಗಿದೆ.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ