Karnataka cm race: 'Bande' foreign tour; Rahul Gandhi in America before DK!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಬೆಂಗಳೂರು: ಇದೇ ವರ್ಷ ನವೆಂಬರ್‌ 5ರಂದು ಅಮೆರಿಕ ಅಧ್ಯಕ್ಷರ ಆಯ್ಕೆಯ (Election of the President of the United States) ಐತಿಹಾಸಿಕ ಚುನಾವಣೆ ನಡೆಯಲಿದ್ದು, ಡೆಮಾಕ್ರೆಟಿಕ್‌ ಪಕ್ಷದಿಂದ ಭಾರತೀಯ ಮೂಲದ ಕಮಲಾ ಹ್ಯಾರೀಸ್‌‌ (Kamala Harris) ಅಭ್ಯರ್ಥಿಯಾಗಿದ್ದರೆ ರಿಪಬ್ಲಿಕನ್‌ ಪಕ್ಷದಿಂದ (Republican Party) ಡೊನಾಲ್ಡ್‌ ಟ್ರಂಪ್‌ 2ನೇ ಸಲ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈಗ ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌ (DK Shivakumar) ಅಮೆರಿಕಾಗೆ ತೆರಳಿದ್ದಾರೆ.

ಹ್ಯಾರಿಸ್‌ಗೂ ಡಿಸಿಎಂಗೂ ಹೇಗೆ ನಂಟು?

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ನಿಂತಿರುವ ಭಾರತ ಮೂಲದ ಕಮಲಾ ಹ್ಯಾರಿಸ್‌ಗೂ ಕರ್ನಾಟಕದ ಡಿ.ಕೆ.ಶಿವಕುಮಾರ್‌ಗೂ ಏನಪ್ಪಾ ಸಂಬಂಧ ಅಂತೀರಾ? ಹೌದು, ಇದು ಡಿ.ಕೆ.ಶಿವಕುಮಾರ್‌ ಆಪ್ತರು, ಕಾಂಗ್ರೆಸ್ಸಿಗರು, ಬಿಜೆಪಿ, ಜೆಡಿಎಸ್‌ನವರ ಜೊತೆ ಬಹುತೇಕ ಕನ್ನಡಿಗರನ್ನೂ ಕಾಡ್ತಿರೋ ಪ್ರಶ್ನೆಯಾಗಿದೆ. ಎಲ್ಲಿಯ ಕಮಲಾ ಹ್ಯಾರಿಸ್‌, ಎಲ್ಲಿಯ ಡಿಕೆಶಿ ಹ್ಯಾರಿಸ್‌ಗೂ ಏನು ನಂಟು ಅಂತಾ ಅದಕ್ಕೂ ಉತ್ತರ ಇದೆ ನೋಡಿ..

ಕಮಲಾ ಹ್ಯಾರಿಸ್‌-ಡಿಕೆಶಿ ಗೆಳೆತನ!

ಕಮಲಾ ತಾಯಿ ಶ್ಯಾಮಲಾ ಗೋಪಾಲನ್‌ ತಮಿಳುನಾಡಿನವರು. ಅಮೆರಿಕದಲ್ಲಿದ್ದರೂ ಭಾರತದಲ್ಲಿ ಟ್ರಸ್ಟ್ ಮೂಲಕ ಜನಸೇವೆ ಮಾಡ್ತಿದ್ದಾರೆ. ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ ಜೊತೆ ಡಿಕೆಶಿ ಅವರಿಗೆ ನಂಟಿದೆಯಂತೆ! ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ಗೆ ಡಿಕೆ ಶಿವಕುಮಾರ್‌ ಎಲ್ಲಾ ರೀತಿಯ ನೆರವನ್ನೂ ಕೊಟ್ಟಿದ್ದಾರೆ ಅಂತೆ. ಹಾಗಾಗಿನೇ ಕಮಲಾ ಹ್ಯಾರಿಸ್‌ ಜೊತೆ ಡಿಕೆಶಿ ರಾಜಕೀಯ ಒಡನಾಟ ಶುರುವಾಗುವ ಲಕ್ಷಣ ಕಾಣಿಸಿದ್ದು. ಅನಿವಾಸಿ ಕನ್ನಡಿಗರ ಮತ ಸೆಳೆಯಲು ಆಹ್ವಾನ ಕೊಟ್ಟಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್‌ 10ರಂದು ಅಮೆರಿಕದ ನಾರ್ತ್ ಕ್ಯಾರೊಲಿನಾದಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಅಮೆರಿಕದಲ್ಲಿರುವ ಭಾರತೀಯ ಮತದಾರರನ್ನು ಸೇರಿಸಲಾಗ್ತಿದ್ದು ಭಾರತೀಯ ಗಣ್ಯರನ್ನೂ ಆಹ್ವಾನಿಸಲಾಗಿದ್ದು ಡಿ.ಕೆ.ಶಿವಕುಮಾರ್‌ ಕೂಡ ಒಬ್ಬರು ಅನ್ನೋದು ಪ್ರಮುಖ ವಿಷ್ಯ.

ಅಂದಹಾಗೆ, ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ದೇಶ ಬಿಟ್ಟು ಹೋಗುವಂತಿಲ್ಲ. ಹೀಗಾಗಿ ಕೋರ್ಟ್‌ನಿಂದ ಅನುಮತಿಯನ್ನೂ ಪಡೆದು ಅಮೆರಿಕಗೆ ಹೋಗಿದ್ದಾರೆ. ಸೆಪ್ಟೆಂಬರ್‌ 14ಕ್ಕೆ ಡಿಕೆಶಿ ವಾಪಸ್ಸಾಗಲಿದ್ದಾರೆ. ಆದರೆ, ಇದು ಖಾಸಗಿ ಕಾರ್ಯಕ್ರಮ ಅಷ್ಟೇ ಅಂತ ಯಾವ ಗುಟ್ಟನ್ನೂ ಡಿ.ಕೆ.ಶಿವಕುಮಾರ್‌ ಬಿಟ್ಟುಕೊಟ್ಟಿಲ್ಲ.

ಡಿಕೆಶಿಗೂ ಮೊದಲೇ ಅಮೆರಿಕ ತಲುಪಿದ ರಾಹುಲ್‌‌:

ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಿನ ಚುನಾವಣೆಯಲ್ಲಿ ಬೆಂಬಲ ಘೋಷಿಸಿತ್ತು. ಅವತ್ತು ಮೋದಿಯವ್ರೇ ಅಮೆರಿಕಾಗೆ ತೆರಳಿ ಟ್ರಂಪ್‌ ಪರ ಮತಯಾಚಿಸಿದ್ರು. ಈಗ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಪರ ಕಾಂಗ್ರೆಸ್‌ ಪ್ರಚಾರ ಮಾಡ್ತಿದೆ. ರಾಹುಲ್ ಗಾಂಧಿಯವ್ರು ಕೂಡ 3 ದಿನಗಳ ಅಮೆರಿಕ ಪ್ರವಾಸ ನಡೆಸ್ತಿದ್ದು ಈಗಾಗ್ಲೇ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ ತಲುಪಿದದಾರೆ ಟೆಕ್ಸಾಸ್‌ ಏರ್‌ಪೋರ್ಟ್‌ನಲ್ಲಿ ರಾಹುಲ್ ಗಾಂಧಿಯವ್ರನ್ನ ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಸ್ವಾಗತಿಸಿದ್ದರು.

ರಾಹುಲ್‌ ಗಾಂಧಿ ವಾಷಿಂಗ್ಟನ್‌, ಡಲ್ಲಾಸ್‌ ನಗರಗಳಲ್ಲಿ, ಜಾರ್ಜ್‌ಟೌನ್‌ ಮತ್ತು ಟೆಕ್ಸಾಸ್‌ ವಿಶ್ವವಿದ್ಯಾಲಯಗಳಲ್ಲಿ ಸಂವಾದ ನಡೆಸ್ತಾರೆ. ಡಿ.ಕೆ.ಶಿವಕುಮಾರ್‌ ನಾರ್ತ್‌ ಕ್ಯಾರೊಲಿನಾದಲ್ಲಿ ಕಮಲಾ ಹ್ಯಾರಿಸ್‌ ಪರ ಪ್ರಚಾರ ಮಾಡ್ತಿದ್ದಾರೆ. ಏನೇ ಆಗ್ಲಿ ಅಮೆರಿಕಾ ಎಲೆಕ್ಷನ್‌ನಲ್ಲೂ ಭಾರತೀಯರ ಪಾತ್ರ ಅದ್ರಲ್ಲೂ ದಕ್ಷಿಣ ಭಾರತದವ್ರು, ನಮ್ಮ ಕನ್ನಡಿಗರ ಪಾತ್ರನೂ ಮುಖ್ಯವಾಗಿದೆ ಅನ್ನೋದಕ್ಕೆ ಡಿಕೆಶಿ ಅಮೆರಿಕ ಟೂರೇ ಸಾಕ್ಷಿ.

ಇದನ್ನೂ ಓದಿ: FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಇದೇ ವೇಳೆ ರಾಹುಲ್ ಗಾಂಧಿ ಮತ್ತು ಡಿಕೆಶಿ ರಹಸ್ಯೆ ಸಭೆಗೆ ವೇದಿಕೆ ಸಿದ್ಧವಾಗಿದೆಯಂತೆ. ಆ ಸಭೆಯಲ್ಲಿ, ಒಂದು ವೇಳೆ ಕರ್ನಾಟಕದ ಸಿಎಂ ಬದಲಾವಣೆ ಮಾಡುವ ಪ್ರಸಂಗ ಬಂದರೆ ಆಗ ಯಾರನ್ನು ಸಿಎಂ ಮಾಡಬೇಕು ಎಂದು ನಿರ್ಧಾರ ಮಾಡಲಾಗುತ್ತದೆ ಅಂತೆ. ಡಿಕೆಶಿ ತಮಗೆ ಸಿಎಂ ಹುದ್ದೆ ನೀಡುವಂತೆ ಲಾಭಿ ಮಾಡಲು ಇದು ಸಕಾಲ ಎಂಬುದು ರಾಜಕೀಯ ಪಂಡಿತರ ವಿಶ್ಲೇಷಣೆಯಾಗಿದೆ.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.