ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಬರಹ: ಶ್ರೀಕಾಂತ ಸರಗಣಾಚಾರಿ

ಕುಷ್ಟಗಿ: ಹಿಂದೂ – ಮುಸ್ಲಿಂ ಭಾಂದವರು ಸೌಹಾರ್ಧತೆಯುತವಾಗಿ ಆಚರಿಸಿಕೊಂಡು ಬಂದಿರುವ ನಾಲ್ಕು ದಶಕಗಳ ಸಂಭ್ರಮದ ನಡೆವೆಯೂ ಪ್ರತಿವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ವಿಘ್ನ ನಿವಾರಣೆಗೆ:

ಪಟ್ಟಣವು ವಾಣ ಜ್ಯ ವಹಿವಾಟು ಮಾರುಕಟ್ಟೆಯ ಕೇಂದ್ರವಾಗಿದ್ದ ಈ ಹಿಂದಿನ ವೆಳೆಯಲ್ಲಿ ಹಳೆ ಬಜಾರ ಓಣ ಯ ಪ್ರತಿಯೊಬ್ಬ ಹಿಂದೂ- ಮುಸ್ಲಿಂ ಸಮುದಾಯದವರು ಸಭೆ ಸೇರಿ ವಿಘ್ನ ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಊರಿಗೆ ಒಳ್ಳೆಯದು ಆಗಲಿ ಎಂಬ ಸದುದ್ದೇಶದಿಂದ ಹಿಂದೂ, ಮುಸ್ಲಿಂ ಗೆಳೆಯರ ಬಳಗದವನ್ನು ರಚಿಸಿಕೊಂಡು ಗಣೇಶೋತ್ಸವ ಆರಂಭಿಸಲು ನಿರ್ಧಾರ ಮಾಡಿ, ೧೯೮೩ ರಲ್ಲಿ ಪ್ರಥಮ ಬಾರಿಗೆ ಗಣೇಶೋತ್ಸವ ಆರಂಭಿಸಿದರು.

ಅಲ್ಲಿಂದ ಇಲ್ಲಿಯ ವರೆಗೂ ಯಾವುದೇ ಅಡೆತಡೆಗಳು ಆಗದಂತೆ ನಿರಂತರವಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. ಹಿಂದು-ಮುಸ್ಲಿಂ ಧರ್ಮ ಸಮನ್ವಯತೆಗೆ ಸಾಕ್ಷಿಯಾಗುವ ಮೂಲಕ ಹಲವಾರು ಜನ ಜಾಗೃತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಜನ ಮನ್ನಣೆ ಗಳಿಸಿದ್ದಾರೆ.

ಭಾವೈಕ್ಯೆತೆಗೆ ಹೆಸರು ವಾಸಿ:

ಪ್ರತಿವರ್ಷವು ಪ್ರತಿಷ್ಠಾಪಿತ ಗಣೇಶ ಮೂರ್ತಿ ಒಂದು ವರ್ಷದಂತೆ ಇನ್ನೊಂದು ವರ್ಷದಲ್ಲಿ ವಿಭಿನ್ನವಾಗಿ ವಿವಿಧ ಅವತಾರಗಳಲ್ಲಿ ವೈವಿದ್ಯಮಯವಾಗಿ ಆಚರಿಕೊಂಡು ಬಂದಿರುವುದು ವಿಶೇಷ. ಹಿಂದಿನ ಕೆಲ ವರ್ಷಗಳ ಹಿಂದೆ ತೆಂಗಿನ ಕಾಯಿ, ಯಡೆಯೂರು ಸಿದ್ದಲಿಂಗೇಶ್ವರ, ಪುಟ್ಟರಾಜ ಕವಿ ಗವಾಯಿಗಳ ಮೂರ್ತಿ ಸೇರಿದಂತೆ ಇನ್ನೂ ಅನೇಕ ವಿಭಿನ್ನ ಗಣೇಶನನ್ನು ಕೂಡಿಸುತ್ತಾ ಬಂದಿದ್ದಾರೆ. ಹಳೆ ಬಜಾರದ ಗಣಪ ಎಂದರೆ ಪ್ರತಿ ವರ್ಷ ಒಂದಾಲ್ಲ ಒಂದು ರೀತಿ ವೈಶ್ಯಷ್ಠತೆಯಿಂದ ಕೂಡಿರಬೇಕು ಎಂಬ ಛಲದಿಂದ ವಿಘ್ನ ವಿನಾಯಕನನ್ನು ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಅದೇ ಪ್ರೀತಿ, ಅದೇ ವಿಶ್ವಾಸ ಮೇಳೈಸಿದ್ದು ಅದರಲ್ಲೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣ ಗೆಯಲ್ಲು ವಿಶೇಷತೆ ಉಳಿಸಿಕೊಂಡು ಬರುವ ಮೂಲಕ ಭಾವೈಕ್ಯೆತೆ ಸಾರುತ್ತಿದ್ದಾರೆ.

ಹಿನ್ನೆಯಲ್ಲಿ: ಗುಡಗೇರಿಯ ದ್ಯಾಮವ್ವನ ಗುಡಿಗೆ ಸಂತ ಶಿಶುನಾಳ ಶರೀಫರು ಹಾಗೂ ಅವರ ಗುರುಗಳಾದ ಗುರುಗೋವಿಂದ ಭಟ್ಟರು ಹೋಗಿದ್ದ ಸಂದರ್ಭದಲ್ಲಿ ಅವರ ಬಳಿ ಇದ್ದ (ಮದ್ಯ ) ಶಂಕರಿ ಖಾಲಿಯಾಗಿರುತ್ತದೆ. ಆವಾಗ ಅವರ ಹತ್ತಿರ ದುಡ್ಡುನೂ ಇಲ್ಲದ ಬಗ್ಗೆ ಗೋಂವಿದ ಭಟ್ಟರಿಗೆ ಸಂತ ಶಿಶು ಶರೀಫಜ್ಜನವರು ಹೇಳುತ್ತಾರೆ. ಆ ಸಂದರ್ಭದಲ್ಲಿ ಶ್ರೀದ್ಯಾಮವ್ವನ ಬಳಿ ಶರೀಪಜ್ಜನವರು ದ್ಯಾಮವ್ವ ನ ಬೇಡಿಕೊಂಡಾಗ ದ್ಯಾಮವ್ವ ದೇವರು ಪ್ರತ್ಯಕ್ಷಳಾಗಿ ಅವರಿಗೆ ನತ್ತು (ಮೂಗತಿ) ಕೊಡುತ್ತಾಳೆ. ಅವಾಗ ಅದನ್ನು ಕೊಟ್ಟು ಅದರಿಂದ ಅವರು (ಮದ್ಯ) ಶಂಕರಿ ಸರಾಯಿ ಖರೀದಿಸಿ ತಂದು ಸೇವೆನೆ ಮಾಡಿ ದ್ಯಾಮವ್ವನ ಗುಡಿಯಲ್ಲಿ ಮಲಗಿರುತ್ತಾರೆ.

ಬೆಳಿಗ್ಗೆ ಪೂಜಾರಿಯೂ ಪೂಜೆ ಮಾಡುವಾಗ ದೇವಿಯ ಮೂಗಿನಲ್ಲಿ ನತ್ತು ಕಾಣ ಸುವದಿಲ್ಲ. ಆಗ ಗ್ರಾಮಸ್ಥರು ಗುರು, ಶಿಷ್ಯರನ್ನು ಕರೆದು ವಿಚಾರಿಸಿದಾಗ ಪನಃ ಆ ನತ್ತು(ಮೂಗತಿ) ದೇವಿಯ ಮೂಗಿನಲಿರುತ್ತದೆ. ಆದನ್ನು ಕಂಡು ಗ್ರಾಮಸ್ಥರು ಆಶ್ಚರ್ಯಗೊಂಡು ಬಗ್ಗೆ ಇತಿಹಾಸ ತಿಳಿದುಕೊಂಡ ನಾವುಗಳು ಅದೇ ಹೊಲಿಕೆಯಲ್ಲಿ ಪಟ್ಟಣದ ಆರಾಧ್ಯ ದೇವಿತೆ ಹಾಗೂ ಗ್ರಾಮದೇವೆತೆ ಶ್ರೀದ್ಯಾಮವ್ವದೇವಿ ದೇವಸ್ಥಾನವನ್ನು ಹೊಲುವ ಪ್ರತಿರೂಪ ಪ್ರತಿಷ್ಠಾಪಿಸಿ, ದೇವಸ್ಥಾನದ ಕಟ್ಟೆಯ ಮೇಲೆ ಶ್ರೀಗಣೇಶ ನು ತಲೆಗೆ ರೂಮಾಲು ಸುತ್ತಿಕೊಂಡು ಕಟ್ಟಿಯ ಮೇಲೆ ಕುಳಿತಿರುವುದು ಮತ್ತು ಈಶ್ವರ ಮೂರ್ತಿ ಗಮನ ಸೆಳೆಯುತ್ತಿದೆ.

ಅದರಂತೆ, ಕಟ್ಟೆಯ ಬಲಭಾಗದಲ್ಲಿ ಸಂತ ಶಿಶುನಾಳ ಶರಿಫಜ್ಜನವರ ಪ್ರತಿರೂಪ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ ಪಿ ಜೆ ಅಬ್ದುಲ್ ಕಲಂರವರ ಮೂರ್ತಿ ಸ್ಥಾಪಿಸಲಾಗಿದೆ.

ಇದನ್ನೂ ಓದಿ: Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಆಕರ್ಷಣೆಯ ಕೇಂದ್ರ ಬಿಂದುವಾಗಿ ಸರ್ವಧರ್ಮದವರು ಸೌರ್ಹಾದತೆಯಿಂದ ಗಣೇಶೋತ್ಸವವನ್ನು ಆಚರಿಕೊಂಡು ಬರಲಾಗುತ್ತಿದೆ ಎಂದು ಶ್ರೀಧರ ಎನ್ ಘೋರ್ಪಡೆ, ಅನ್ವರ್ ಅತ್ತಾರ್, ಅಮಿನುದ್ದಿನ್ ಮುಲ್ಲಾ, ಸಂತೋಷ ಸರಗಣಚಾರಿ, ಬಸವರಾಜ ವಣಗೇರಿ, ರವಿ ಅಗಳಕೇರಿ, ಕಳಕಪ್ಪ ಬಸಿರಿಗಿಡದ, ಬಸವರಾಜ ಗುತ್ತೂರು, ಸಂಗಮೇಶ ಕುರ್ನಾಳ, ಶಿವಕುಮಾರ , ಗೋಪಾಲ ಶೆಟ್ಟರ್, ವಸಂತ ರಾಯ್ಕರ್ ಹಾಗೂ ಇತರರು ತಿಳಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ