Viral video: The brave girl on the beach raised an auto rickshaw to save her mother!

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಮಂಗಳೂರು: ಪಲ್ಟಿಯಾದ ಆಟೋರಿಕ್ಷಾವನ್ನೇ ಒಂದೇ ಟೇಕ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಮೇಲಕ್ಕೆತ್ತಿ ನಿಲ್ಲಿಸಿ ರಿಕ್ಷಾದಡಿ ಸಿಲುಕಿದ್ದ ತನ್ನ ತಾಯಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾಳೆ‌ ಈ ವೀರ ಬಾಲಕಿ!

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಏಳನೇ ತರಗತಿ ವಿದ್ಯಾರ್ಥಿನಿಯ ಈ ಸಾಹಸಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಿನ್ನಿಗೋಳಿಯ ಈ ಸಾಹಸ‌ ಮಾಡಿದ ಧೀರ ಬಾಲಕಿಯ ಹೆಸರು ವೈಭವಿ. ಕಿನ್ನಿಗೋಳಿ ರಾಮಮಂದಿರ ಸಮೀಪ ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಕಿನ್ನಿಗೋಳಿ ರಾಜರತ್ನಪುರದ ನಿವಾಸಿ ಚೇತನಾ (35) ಅವರು ರಸ್ತೆ ದಾಟುತ್ತಿದ್ದಾಗ ಕಟೀಲು ಕಡೆಯಿಂದ ಬಂದ ರಿಕ್ಷಾ ಮಹಿಳೆಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಮಹಿಳೆ ರಿಕ್ಷಾದಡಿ ಬಿದ್ದು ಗಂಭೀರ ಗಾಯಗೊಂಡಿದ್ದರು.

ಘಟನಾ ಸ್ಥಳದ ಸಮೀಪದಲ್ಲೇ ಟ್ಯೂಶನ್‌ ಕ್ಲಾಸ್‌ ಬಿಟ್ಟು ಹೊರಬರುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿ ಕಣ್ಣೆದುರೇ ಘಟನೆ ಸಂಭವಿಸಿದೆ. ಆಗ ಆಕೆ ಓಡೋಡಿ ಬಂದು ಒಂದೇ ಉಸಿರಲ್ಲಿ ರಿಕ್ಷಾವನ್ನು ಮೇಲಕ್ಕೆತ್ತಿ ತಾಯಿಯನ್ನು ರಕ್ಷಿಸಿದ್ದಾಳೆ.

ಇದೇ ವೇಳೆ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿದ್ದ ಇನ್ನಿತರ ಕೆಲವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಪಿಗ್ಮಿ ಕಲೆಕ್ಷನ್‌ ಕೆಲಸ ಮಾಡುವ ಚೇತನಾ ಮಗಳನ್ನು ಕರೆದೊಯ್ಯಲು ಅಲ್ಲಿಗೆ ಬಂದಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಸಿಎಂ ಶಹಬ್ಬಾಸ್ ಗಿರಿ:

ಈ ಧೀರ ಬಾಲಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಇದನ್ನೂ ಓದಿ: Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ