Rameshwaram cafe blast: BJP office blast attempt

Rameshwaram cafe blast: ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ!

Rameshwaram cafe blast: ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ!

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣದ (Rameshwaram cafe blast) ನಾಲ್ವರು ಆರೋಪಿಗಳಾದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹಮದ್ ಹಾಗೂ ಮುಜಾಮಿಲ್ ಷರೀಫ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ದಂದೇ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ಪೋಟಿಸಲು ಯತ್ನಿಸಿ ವಿಫಲವಾಗಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ್ದರು ಎಂಬ ಅಂಶ ಚಾಜ್ ೯ಶೀಟ್‌ನಲ್ಲಿ ಬಹಿರಂಗವಾಗಿದೆ.

ಮುಸ್ಲಿಂ ಯುವಕರೇ ಐಸಿಸ್‌ನ ಟಾರ್ಗೆಟ್:

ಶಿವಮೊಗ್ಗ ಮೂಲದವರಾಗಿದ್ದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹ ಮದ್ ತಾಹಾ ಐಸಿಸ್‌ನಿಂದ ಪ್ರೇರಿತರಾ ಗಿದ್ದು, ಮುಸ್ಲಿಂ ಯುವಕರನ್ನು ಐಸಿಸ್‌ನತ್ತ ಸೆಳೆಯುತ್ತಿ ದ್ದರು. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಹಾಗೂ ಮುಜಾ ಮಿಲ್ ಷರೀಫ್‌ನನ್ನು ಸಹ ಅದೇ ರೀತಿ ಐಸಿಸ್‌ನ ವಿಚಾರಗಳೆಡೆಗೆ ಸೆಳೆಯ ಲಾಗಿತ್ತು.

ಆರೋಪಿಗಳು ಭಾರತದ ಸಿಮ್ ಕಾರ್ಡ್‌ಗಳು, ಭಾರತೀಯ ಬ್ಯಾಂಕ್ ಖಾತೆ ಹಾಗೂ ಡಾರ್ಕ್ ವೆಬ್ ಬಳಸಿ ಸೃಷ್ಟಿಸಿದ ಭಾರತ ಹಾಗೂ ಬಾಂಗ್ಲಾದೇಶದ ಗುರುತಿನ ಚೀಟಿಗಳನ್ನು ಹೊಂದಿದ್ದರು ಎಂದು ಚಾಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.

ಏನಿದು ಪ್ರಕರಣ?

ಬೆಂಗಳೂರಿನ ಐಟಿಪಿಎಲ್‌ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಐಇಡಿ ಬಳಸಿ ಸ್ಪೋಟಿಸಲಾಗಿತ್ತು. ಸ್ಪೋಟದ ತೀವ್ರತೆಗೆ ಗ್ರಾಹಕರು, ಕೆಫೆ ಸಿಬ್ಬಂದಿ ಸಹಿತ 9 ಜನರು ಗಾಯಗೊಂಡಿ ದ್ದರು. ಬಳಿಕ ಪ್ರಕರಣದ ತನಿಖೆ ಆರಂಭಿ ಸಿದ್ಧ ಎನ್‌ಐಎ, ಆರೋಪಿ ಮಸಾವಿರ್‌ ಹುಸೇನ್ ಶಾಜೀಬ್‌ ಹಾಗೂ ಅಬ್ದುಲ್ ಮತೀನ್ ಅಹಮದ್ ತಾಹಾನ ಪಾತ್ರದ ಕುರಿತು ಮಾಹಿತಿ ಕಲೆ ಹಾಕಿತ್ತು.

ಇದನ್ನು ಓದಿ: ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಆರೋಪಿಗಳನ್ನು ಬರೋಬ್ಬರಿ 42 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ