Muddebihal: eviction of poor shed, demand for money from PDO for GPS- allegation

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಗ್ರಾಪಂ ಪಿಡಿಒ ವಿಜಯಾ ಮುದಗಲ್ ಹಾಗೂ ಕಾರ್ಯದರ್ಶಿ ವಿಲಾಸ ಚವ್ಹಾಣ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದು ಮನೆಗಳ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಯರಝರಿ ಪಂಚಾಯಿತಿ ವ್ಯಾಪ್ತಿಯ ಹಂಡರಗಲ್ ಗ್ರಾಮಸ್ಥರು ತಾಪಂ ಇಒಗೆ ಸೋಮವಾರ ದೂರು ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಇಲ್ಲಿನ ತಾಲ್ಲೂಕಾ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಂಡರಗಲ್ಲ ಗ್ರಾಮದ ಹುಲ್ಲಪ್ಪ ಕೇಸಾಪೂರ ಮಾತನಾಡಿ, ಯರಝರಿ ಗ್ರಾಪಂನ ವ್ಯಾಪ್ತಿಯಲ್ಲಿ ಹಂಡರಗಲ್ಲ ಗ್ರಾಮದಲ್ಲಿ ಸೆ.6 ರಂದು ಪೊಲೀಸರ ಬಲದೊಂದಿಗೆ ಪಿಡಿಒ, ಕಾರ್ಯದರ್ಶಿಗಳು ಬಂದು ನಮ್ಮ ಮನೆಯ ಪಕ್ಕದಲ್ಲಿ ಬುದ್ಧಿಮಾಂದ್ಯಳು, ವಿಕಲಚೇತನಳು ಇರುವ ಮರಗಮ್ಮ ಕೇಸಾಪುರ ಹಾಕಿಕೊಂಡು ಉಪಜೀವನ ನಡೆಸುತ್ತಿದ್ದ ಶೆಡ್‌ನ್ನು ತೆರವುಗೊಳಿಸಿದ್ದಾರೆ. ಗಾಂವಠಾಣ ಜಾಗೆ ಎಂದು ಅದನ್ನು ಪಿಡಿಒ, ಕಾರ್ಯದರ್ಶಿಗಳು ತೆರವುಗೊಳಿಸಿದ್ದಾರೆ.

ಗ್ರಾಮದಲ್ಲಿ ಇನ್ನೂ ಹಲವಾರು ಕಡೆ ಗಾಂವಠಾಣಾ ಜಾಗೆ ಇದ್ದರೂ ನಮ್ಮ ಮಗಳಿದ್ದ ಶೆಡ್ ತೆರವುಗೊಳಿಸಿ ಅನ್ಯಾಯ ಮಾಡಿದ್ದಾರೆ ಎಂದು ತಾಪಂ ಇಒಗೆ ದೂರಿದರು.

ಇದಕ್ಕೆ ಉತ್ತರಿಸಿದ ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ, ಸದರಿ ಜಾಗೆ ಗ್ರಾಮ ಪಂಚಾಯಿತಿಗೆ ಸೇರಿದ ಗಾಂವಠಾಣೆ ಜಾಗೆ ಆಗಿದ್ದು ಅಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಜಾಗೆ ಗುರುತಿಸಲಾಗಿದೆ.ಹೀಗಾಗಿ ಅಲ್ಲಿನ ಅತಿಕ್ರಮಣ ತೆರವುಗೊಳಿಸಲಾಗಿದೆ. ಸರಕಾರದ ಜಾಗೆಯನ್ನು ಯಾರೊಬ್ಬರೂ ಅತಿಕ್ರಮಣ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ತಾಪಂ ಇಒ ನಿಂಗಪ್ಪ ಮಸಳಿ ಮಾತನಾಡಿ, ಗ್ರಾಪಂ ಜಾಗೆ ಅತಿಕ್ರಮಿಸಲು ಅವಕಾಶ ಇಲ್ಲ.ಆದರೂ ಹಂಡರಗಲ್ಲ ಗ್ರಾಮದಲ್ಲಿನ ಗಾಂವಠಾಣೆ ಜಾಗೆ ಎಷ್ಟಿದೆ ಎಂಬುದನ್ನು ಪರಿಶೀಲನೆ ನಡೆಸಿ ಸದರಿ ವಿವಾದದ ಕುರಿತು ವರದಿ ನೀಡಲು ತಾಪಂ ವ್ಯವಸ್ಥಾಪಕರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಪಿಡಿಒ ಅವರಿಂದ ಹಣಕ್ಕೆ ಬೇಡಿಕೆ ಆರೋಪ

ಗ್ರಾಮ ಪಂಚಾಯಿತಿ ಪಿಡಿಒ ವಿಜಯಾ ಮುದಗಲ್ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಮನೆಗಳ ಜಿಪಿಎಸ್ ಮಾಡಲು 8 ಸಾವಿರ ರೂಪಾಯಿ ಹಣ ಕೊಟ್ಟಿದ್ದೇನೆ ಎಂದು ಗ್ರಾಮದ ದಾವಲಸಾಬ ಗುಡೂರ ಆರೋಪಿಸಿದರು.

ಸನ್ 2021ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ನನ್ನ ಪತ್ನಿಯ ಹೆಸರಿನಲ್ಲಿ ಮನೆ ಮಂಜೂರಾಗಿದ್ದು ಮೂರನೇ ಹಂತಕ್ಕೆ ಮನೆ ಬಂದು ನಿಂತಿದೆ.ಜಿಪಿಎಸ್ ಮಾಡಿಸಲು ಹಣವನ್ನು ಕೊಟ್ಟಿದ್ದೇನೆ. ಆದರೆ ಜಿಪಿಎಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಇಬ್ರಾಹಿಂ ಮಾಗಿ ಮಾತನಾಡಿ, ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ ಗ್ರಾಮೀಣ ಭಾಗದ ಸಮಸ್ಯೆಗಳನ್ನು ತೆಗೆದುಕೊಂಡು ಹೋದರೆ ಜನರೊಂದಿಗೆ ಉಡಾಫೆಯೊಂದಿಗೆ ಮಾತನಾಡುತ್ತಾರೆ. ಅಲ್ಲದೇ ತಮ್ಮದೇ ಒಂದು ಗುಂಪು ಕಟ್ಟಿಕೊಂಡಿದ್ದು ಧ್ವನಿ ಎತ್ತುವವರ ಮೇಲೆ ಹೊಡೆಸುವ ಬೆದರಿಕೆ ಹಾಕುತ್ತಾರೆ. ಸೌಜನ್ಯದಿಂದ ವರ್ತಿಸುವುದೇ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಜಿಪಿಎಸ್‌ಗೆ ಪಿಡಿಒ ಹಣ ಪಡೆದುಕೊಳ್ಳುತ್ತಾರೆ ಎನ್ನುವ ಆರೋಪ ಬಂದಾಗ ತಾಪಂ ಇಒ ಎದುರಿನಲ್ಲೇ ದೂರುದಾರರನ್ನು ಬೆದರಿಸುವ ಧಾಟಿಯಲ್ಲಿ ಕಾರ್ಯದರ್ಶಿ ವಿಲಾಸ ಚವ್ಹಾಣ ಅವರು ನಡೆದುಕೊಂಡಿದ್ದು ಕಂಡು ಬಂದಿತು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600