Muddebihal: eviction of poor shed, demand for money from PDO for GPS- allegation

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಗ್ರಾಪಂ ಪಿಡಿಒ ವಿಜಯಾ ಮುದಗಲ್ ಹಾಗೂ ಕಾರ್ಯದರ್ಶಿ ವಿಲಾಸ ಚವ್ಹಾಣ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದು ಮನೆಗಳ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಯರಝರಿ ಪಂಚಾಯಿತಿ ವ್ಯಾಪ್ತಿಯ ಹಂಡರಗಲ್ ಗ್ರಾಮಸ್ಥರು ತಾಪಂ ಇಒಗೆ ಸೋಮವಾರ ದೂರು ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಇಲ್ಲಿನ ತಾಲ್ಲೂಕಾ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಂಡರಗಲ್ಲ ಗ್ರಾಮದ ಹುಲ್ಲಪ್ಪ ಕೇಸಾಪೂರ ಮಾತನಾಡಿ, ಯರಝರಿ ಗ್ರಾಪಂನ ವ್ಯಾಪ್ತಿಯಲ್ಲಿ ಹಂಡರಗಲ್ಲ ಗ್ರಾಮದಲ್ಲಿ ಸೆ.6 ರಂದು ಪೊಲೀಸರ ಬಲದೊಂದಿಗೆ ಪಿಡಿಒ, ಕಾರ್ಯದರ್ಶಿಗಳು ಬಂದು ನಮ್ಮ ಮನೆಯ ಪಕ್ಕದಲ್ಲಿ ಬುದ್ಧಿಮಾಂದ್ಯಳು, ವಿಕಲಚೇತನಳು ಇರುವ ಮರಗಮ್ಮ ಕೇಸಾಪುರ ಹಾಕಿಕೊಂಡು ಉಪಜೀವನ ನಡೆಸುತ್ತಿದ್ದ ಶೆಡ್‌ನ್ನು ತೆರವುಗೊಳಿಸಿದ್ದಾರೆ. ಗಾಂವಠಾಣ ಜಾಗೆ ಎಂದು ಅದನ್ನು ಪಿಡಿಒ, ಕಾರ್ಯದರ್ಶಿಗಳು ತೆರವುಗೊಳಿಸಿದ್ದಾರೆ.

ಗ್ರಾಮದಲ್ಲಿ ಇನ್ನೂ ಹಲವಾರು ಕಡೆ ಗಾಂವಠಾಣಾ ಜಾಗೆ ಇದ್ದರೂ ನಮ್ಮ ಮಗಳಿದ್ದ ಶೆಡ್ ತೆರವುಗೊಳಿಸಿ ಅನ್ಯಾಯ ಮಾಡಿದ್ದಾರೆ ಎಂದು ತಾಪಂ ಇಒಗೆ ದೂರಿದರು.

ಇದಕ್ಕೆ ಉತ್ತರಿಸಿದ ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ, ಸದರಿ ಜಾಗೆ ಗ್ರಾಮ ಪಂಚಾಯಿತಿಗೆ ಸೇರಿದ ಗಾಂವಠಾಣೆ ಜಾಗೆ ಆಗಿದ್ದು ಅಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಜಾಗೆ ಗುರುತಿಸಲಾಗಿದೆ.ಹೀಗಾಗಿ ಅಲ್ಲಿನ ಅತಿಕ್ರಮಣ ತೆರವುಗೊಳಿಸಲಾಗಿದೆ. ಸರಕಾರದ ಜಾಗೆಯನ್ನು ಯಾರೊಬ್ಬರೂ ಅತಿಕ್ರಮಣ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ತಾಪಂ ಇಒ ನಿಂಗಪ್ಪ ಮಸಳಿ ಮಾತನಾಡಿ, ಗ್ರಾಪಂ ಜಾಗೆ ಅತಿಕ್ರಮಿಸಲು ಅವಕಾಶ ಇಲ್ಲ.ಆದರೂ ಹಂಡರಗಲ್ಲ ಗ್ರಾಮದಲ್ಲಿನ ಗಾಂವಠಾಣೆ ಜಾಗೆ ಎಷ್ಟಿದೆ ಎಂಬುದನ್ನು ಪರಿಶೀಲನೆ ನಡೆಸಿ ಸದರಿ ವಿವಾದದ ಕುರಿತು ವರದಿ ನೀಡಲು ತಾಪಂ ವ್ಯವಸ್ಥಾಪಕರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಪಿಡಿಒ ಅವರಿಂದ ಹಣಕ್ಕೆ ಬೇಡಿಕೆ ಆರೋಪ

ಗ್ರಾಮ ಪಂಚಾಯಿತಿ ಪಿಡಿಒ ವಿಜಯಾ ಮುದಗಲ್ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಮನೆಗಳ ಜಿಪಿಎಸ್ ಮಾಡಲು 8 ಸಾವಿರ ರೂಪಾಯಿ ಹಣ ಕೊಟ್ಟಿದ್ದೇನೆ ಎಂದು ಗ್ರಾಮದ ದಾವಲಸಾಬ ಗುಡೂರ ಆರೋಪಿಸಿದರು.

ಸನ್ 2021ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ನನ್ನ ಪತ್ನಿಯ ಹೆಸರಿನಲ್ಲಿ ಮನೆ ಮಂಜೂರಾಗಿದ್ದು ಮೂರನೇ ಹಂತಕ್ಕೆ ಮನೆ ಬಂದು ನಿಂತಿದೆ.ಜಿಪಿಎಸ್ ಮಾಡಿಸಲು ಹಣವನ್ನು ಕೊಟ್ಟಿದ್ದೇನೆ. ಆದರೆ ಜಿಪಿಎಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಇಬ್ರಾಹಿಂ ಮಾಗಿ ಮಾತನಾಡಿ, ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ ಗ್ರಾಮೀಣ ಭಾಗದ ಸಮಸ್ಯೆಗಳನ್ನು ತೆಗೆದುಕೊಂಡು ಹೋದರೆ ಜನರೊಂದಿಗೆ ಉಡಾಫೆಯೊಂದಿಗೆ ಮಾತನಾಡುತ್ತಾರೆ. ಅಲ್ಲದೇ ತಮ್ಮದೇ ಒಂದು ಗುಂಪು ಕಟ್ಟಿಕೊಂಡಿದ್ದು ಧ್ವನಿ ಎತ್ತುವವರ ಮೇಲೆ ಹೊಡೆಸುವ ಬೆದರಿಕೆ ಹಾಕುತ್ತಾರೆ. ಸೌಜನ್ಯದಿಂದ ವರ್ತಿಸುವುದೇ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಜಿಪಿಎಸ್‌ಗೆ ಪಿಡಿಒ ಹಣ ಪಡೆದುಕೊಳ್ಳುತ್ತಾರೆ ಎನ್ನುವ ಆರೋಪ ಬಂದಾಗ ತಾಪಂ ಇಒ ಎದುರಿನಲ್ಲೇ ದೂರುದಾರರನ್ನು ಬೆದರಿಸುವ ಧಾಟಿಯಲ್ಲಿ ಕಾರ್ಯದರ್ಶಿ ವಿಲಾಸ ಚವ್ಹಾಣ ಅವರು ನಡೆದುಕೊಂಡಿದ್ದು ಕಂಡು ಬಂದಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು